ಅಯೋಧ್ಯೆ ರಾಮ ಮಂದಿರದ ಮೇಲೆ ಹಾರಾಡಿದ ಕೇಸರಿ ಧ್ವಜ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ

ಅಯೋಧ್ಯೆ ರಾಮ ಮಂದಿರದ ಮೇಲೆ ಹಾರಾಡಿದ ಕೇಸರಿ ಧ್ವಜ –   ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ

ಅಯೋಧ್ಯೆಯಲ್ಲಿ ರಾಮ ಮಂದಿರದ ಮೇಲೆ ಕೇಸರಿ ಧ್ವಜ ಇಂದು ಹಾರಾಡಿದೆ(. ಇಂದು ಪ್ರಧಾನಿ ನರೇಂದ್ರ ಮೋದಿ ಭಗವಾಧ್ವಜದ ಧ್ವಜಾರೋಹಣವನ್ನು ನೆರವೇರಿಸಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ದೇಶದ ಮೂಲೆ ಮೂಲೆಗಳಿಂದ ಗಣ್ಯಾತೀಗಣ್ಯರು ಅಯೋಧ್ಯೆಗೆ ಬಂದಿಳಿದಿದ್ದಾರೆ. ಮತ್ತೊಂದೆಡೆ ಸುಮಾರು 500ವರ್ಷಗಳ ಕಾಲ ಕೋಟ್ಯಂತರ ಹಿಂದೂಗಳು ಕಂಡಿದ್ದ ಕನಸು ನನಸಾಗುತ್ತಿರುವುದನ್ನು ಕೋಟ್ಯಂತರ ಜನ ಕಣ್ತುಂಬಿಕೊಂಡಿದ್ದಾರೆ

ಈ ಸಮಾರಂಭವು “ಅಭಿಜೀತ್ ಮುಹೂರ್ತ”ದ ಸಮಯದಲ್ಲಿ ನಡೆದಿದ್ದು, ಧಾರ್ಮಿಕ ಕಾರ್ಯಕ್ರಮಕ್ಕೆ ಅತ್ಯಂತ ಶುಭ ಸಮಯವೆಂದು ಪರಿಗಣಿಸಲಾಗಿದೆ. ಶ್ರೀ ರಾಮ ಜನ್ಮಭೂಮಿ ದೇವಾಲಯ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಾತನಾಡಿ, ಈ ಭವ್ಯ ಕಾರ್ಯಕ್ರಮದಲ್ಲಿ ಸುಮಾರು 6,000 ರಿಂದ 8,000 ಆಹ್ವಾನಿತ ಗಣ್ಯರಿದ್ದಾರೆ. ಇನ್ನು ಶ್ರೀರಾಮ ಲಲ್ಲಾನ ಸನ್ನಿಧಿಯಲ್ಲಿ ನಡೆಯುತ್ತಿರುವ ಈ ಮಂಗಳ ಕಾರ್ಯವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನ ಅಯೋಧ್ಯೆಗೆ ತಲುಪಿದ್ದಾರೆ ಎಂದು ತಿಳಿಸಿದ್ದಾರೆ.‌

ಇದನ್ನೂ ಓದಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಬಹುನಿರೀಕ್ಷಿತ ಭಾರತ ಭೇಟಿ ಮತ್ತೊಮ್ಮೆ ಮುಂದೂಡಿಕೆ

ಅಯೋಧ್ಯೆಗೆ ಆಗಮಿಸುತ್ತಿದ್ದಂತೆ ರಾಮ ಜನ್ಮಭೂಮಿ ಸಂಕೀರ್ಣದಲ್ಲಿರುವ ಏಳು ದೇವಾಲಯಗಳಿಗೆ ಭೇಟಿ ನೀಡಿದ ಮೋದಿ ಮಾತಾ ಅನ್ನಪೂರ್ಣ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ರಾಮ ದರ್ಬಾರ್‌ನಲ್ಲಿ ರಾಮಲಲ್ಲಾಗೆ ಪೂಜೆ ನೆರವೇರಿಸಿದರು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಅವರೊಂದಿಗೆ ಹಾಜರಿದ್ದರು.
ಇದಕ್ಕೂ ಮೊದಲು, ರಾಮ ಮಂದಿರದಲ್ಲಿ ಧರ್ಮಧ್ವಜವನ್ನು ಉದ್ಘಾಟಿಸಿ ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸನಾತನ ಸಂಸ್ಕೃತಿಯ ಪುನರುಜ್ಜೀವನದ ಈ ದೈವಿಕ ಸಂದೇಶವು ಭಾರತದಾದ್ಯಂತ ಅದಮ್ಯ ಆಧ್ಯಾತ್ಮಿಕ ಶಕ್ತಿಯನ್ನು ತುಂಬುತ್ತಿದೆ. ಲಕ್ಷಾಂತರ ರಾಮ ಭಕ್ತರ ನಂಬಿಕೆ, ತಪಸ್ಸು ಮತ್ತು ಹಂಬಲ ಇಂದು ಹೊಸ ಶಿಖರವನ್ನು ತಲುಪಲಿದೆ ಎಂದು ಹೇಳಿದರು.
ಕೇಸರಿ ಧ್ವಜದ ಮಹತ್ವ
ರಾಮ ಮಂದಿರದ ಮೇಲೆ ಹಾರುವ ತ್ರಿಕೋನಾಕಾರದ ಕೇಸರಿ ಧ್ವಜವು 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿದ್ದು, ರಾಮನ ಶೌರ್ಯ, ಓಂ ಚಿಹ್ನೆ ಮತ್ತು ಕೋವಿದಾರ್ ವೃಕ್ಷವನ್ನು ಸಂಕೇತಿಸುವ ಹೊಳೆಯುವ ಸೂರ್ಯನನ್ನು ಒಳಗೊಂಡಿದೆ. ಇದು ಘನತೆ, ಏಕತೆ, ಸಾಂಸ್ಕೃತಿಕ ನಿರಂತರತೆ ಮತ್ತು ರಾಮ ರಾಜ್ಯದ ಆದರ್ಶಗಳನ್ನು ಪ್ರತಿನಿಧಿಸುತ್ತದೆ. ಧ್ವಜವು ದೇವಾಲಯದ ಶಿಖರದ ಮೇಲೆ ಸಾಂಪ್ರದಾಯಿಕ ಉತ್ತರ ಭಾರತೀಯ ನಾಗರ ಶೈಲಿಯಲ್ಲಿ ಹಾರಲಿದೆ.

Kishor KV