ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ₹3,000 ಕೋಟಿ ಅಕ್ರಮ – ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ!

ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ₹3,000 ಕೋಟಿ ಅಕ್ರಮ – ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ!

ಗ್ಯಾರಂಟಿ ಸ್ಕೀಮ್​ಗಳ ಜಾರಿಗೆ ಕಸರತ್ತು ನಡೆಸುತ್ತಿರುವ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧವೂ ಸಮರ ಸಾರಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿನ ಅಕ್ರಮದ ಬಗ್ಗೆ ತನಿಖೆ ನಡೆಸಲು ಆದೇಶ ನೀಡಿದ್ದಾರೆ.

ಇದನ್ನೂ ಓದಿ : ದ್ವೇಷ ಬಿತ್ತುವ ಪಠ್ಯಗಳಿಗೆ ಕತ್ತರಿ ಹಾಕಲು ಕಸರತ್ತು – ಪರಿಷ್ಕರಣೆ ಮಾಡಿಯೇ ಸಿದ್ಧವೆಂದ ಮಧು ಬಂಗಾರಪ್ಪ!

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ತಾವು ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಜಾರಿಗೆ ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಇದರ ನಡುವೆ ಬಿಜೆಪಿ (BJP) ಆಡಳಿತದಲ್ಲಾದ ಹಗರಣದ ಅಳಕ್ಕೂ ಸರ್ಕಾರ ಕೈಹಾಕಲು ಮುಂದಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆದ ಅಕ್ರಮಗಳ ಕೂಲಂಕಷ ತನಿಖೆಗೆ ಕಾಂಗ್ರೆಸ್(Congress) ಸರ್ಕಾರ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ( Kalyan Karnataka Development Board) ಅನುದಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎರಡ್ಮೂರು ವರ್ಷಗಳಿಂದ 3000 ಕೋಟಿ ರೂ. ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಇಲಾಖಾ ತನಿಖೆ ನಡೆಸಲು ಆದೇಶಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಅದರಂತೆ ಇದೀಗ ಸಿದ್ದರಾಮಯ್ಯ ಅವರು ಈ ಕೂಡಲೇ ಈ ವಿಷಯದ ಕುರಿತು ನಿರ್ದಾಕ್ಷಿಣ ಇಲಾಖಾ ತನಿಖೆ ನಡೆಸಲು ಆದೇಶ ಹೊರಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎಲ್ಲೆಲ್ಲಿ ನಿಯಮಬಾಹಿರವಾಗಿ ಅನುದಾನಗಳನ್ನು ವಿನಿಯೋಗಿಸಲಾಗಿದೆ? ಯಾವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬುದರ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ತಪ್ಪಿತಸ್ಥರ ವಿವರಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಇನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಸಂಘದಿಂದ ಅನುದಾನ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿದ್ದರಾಮಯ್ಯನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದರು. ಸಿಎಂ ವಿವೇಚನ ಕೋಟಾದಲ್ಲಿ ಅಭಿವೃದ್ಧಿ ಮಂಡಳಿ ಸಿದ್ಧಪಡಿಸಿದ ಕ್ರಿಯಾ ಯೋಜನೆಯಲ್ಲಿ ಅಕ್ರಮ ಆಗಿದೆ. ಅಭಿವೃದ್ಧಿ ಮಂಡಳಿಯ ಕಳಪೆ ಕಾಮಗಾರಿ ಬಗ್ಗೆ ಸಿಎಜಿ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ಮಾಡುವ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು.

suddiyaana