ಗುಜರಾತ್ನಲ್ಲಿ ಮಳೆರಾಯನ ಆರ್ಭಟ – 24 ಗಂಟೆಯಲ್ಲಿ ಮಳೆಗೆ ಪ್ರಾಣ ಬಿಟ್ಟ 18 ಜನ

ಇಡೀ ದೇಶದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಗುಜರಾತ್ ರಾಜ್ಯದ ಜನರ ಪರಿಸ್ಥಿತಿ ಅಲ್ಲೋಲ ಕಲ್ಲೋಲ ಆಗಿದೆ. ಗುಜರಾತ್ನಲ್ಲಿ ಕಳೆದ 24 ಗಂಟೆಯಲ್ಲಿ ಸತತವಾಗಿ ಸುರಿದ ಮಳೆಗೆ 18 ಮಂದಿ ಜೀವ ಕಳೆದುಕೊಂಡಿದ್ದಾರೆ. ಮಳೆಯ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ರಾಜ್ಯದ 25 ಜಿಲ್ಲೆಗಳಿಗೆ NDRF, SDRF ತಂಡಗಳ ನಿಯೋಜನೆ ಮಾಡಲಾಗಿದೆ. ಬೋಟಡ್ ಜಿಲ್ಲೆಯಲ್ಲಿ ಕಮದಾಡ್ ಡ್ಯಾಂ ಗೇಟ್ ತೆರೆದು ನೀರನ್ನು ಹೊರ ಬಿಡಲಾಗಿದೆ. ಡ್ಯಾಂ ತುಂಬಿದ್ದರಿಂದ ಅಧಿಕಾರಿಗಳು ಮುಂಜಾಗೃತ ಕ್ರಮವಾಗಿ ಗೇಟ್ ತೆರೆದಿದ್ದಾರೆ.
ಮತ್ತೊಂದು ಕಡೆ ಗುಜರಾತ್ ಸಿಎಂ ಭುಪೇಂದ್ರ ಪಟೇಲ್ ಅವರು ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಇನ್ನೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ನಿನ್ನೆ ಸಂಜೆ ಭಾರಿ ಮಳೆಯಾಗಿದೆ. ಹೀಗಾಗಿ ದೆಹಲಿಯಿಂದ ಹಾರಾಟ ನಡೆಸಬೇಕಿದ್ದ 14 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.
ಮಹಾರಾಷ್ಟ್ರದ ಮುಂಬೈನಲ್ಲೂ ಬೆಳ್ಳಂಬೆಳಗ್ಗೆ ಭಾರೀ ಮಳೆ ಆಗಿದೆ. ಅಲ್ಲದೇ ಹವಾಮಾನ ಇಲಾಖೆ ಮುಂದಿನ 24 ಗಂಟೆಯಲ್ಲಿ ನಗರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಬೀಳಲಿದೆ ಅಂತಾ ಎಚ್ಚರಿಕೆ ನೀಡಿದೆ. ಬೆಳಗ್ಗೆ ಸುರಿದ ಮಳೆಯಿಂದಾಗಿ ಶಾಲೆ, ಕಾಲೇಜು, ಕಚೇರಿ ಹೋಗೋರಿಗೆ ಮತ್ತು ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗಿದೆ.
ಇನ್ನು ರಾಜ್ಯದಲ್ಲಿಮಳೆ ಆರ್ಭಟ ಹೆಚ್ಚಾಗಿದ್ದು, ಉತ್ತರಕನ್ನಡ ದಕ್ಷಿಣ ಕನ್ನಡಿ, ಕೊಡಗು, ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.