2023ರಲ್ಲಿ ಮಹಾ ಗಂಡಾಂತರ!- ಬಾಬಾ ವಂಗಾ ಭವಿಷ್ಯವಾಣಿ
‘ಭೂಮಿ ಮೇಲೆ ಏಲಿಯನ್ ಅಟ್ಯಾಕ್’ – ‘ಸಾಂಕ್ರಾಮಿಕ ರೋಗಗಳ ಕಾಟ’

2023ರಲ್ಲಿ ಮಹಾ ಗಂಡಾಂತರ!- ಬಾಬಾ ವಂಗಾ ಭವಿಷ್ಯವಾಣಿ‘ಭೂಮಿ ಮೇಲೆ ಏಲಿಯನ್ ಅಟ್ಯಾಕ್’ – ‘ಸಾಂಕ್ರಾಮಿಕ ರೋಗಗಳ ಕಾಟ’

ಸೋಫಿಯಾ: ಭವಿಷ್ಯ ಹೇಳುವ ಮಹಿಳೆ ಎಂದೇ ಹೆಸರಾಗಿರುವ ಬಾಬಾ ವಂಗಾ ಕೆಲ ತಿಂಗಳ ಹಿಂದೆಯಷ್ಟೇ ಭಾರತದ ಭವಿಷ್ಯ ನುಡಿದು ಆತಂಕ ಸೃಷ್ಟಿಸಿದ್ದರು. ಇದೀಗ ವಿಶ್ವದ ಭವಿಷ್ಯ ನುಡಿದು ಮತ್ತೊಮ್ಮೆ ಆತಂಕ ಉಂಟಾಗುವಂತೆ ಮಾಡಿದ್ದಾರೆ.

ವಿಶ್ವದ ಅಂತ್ಯದ ಬಗ್ಗೆ ಸುಳಿವು ಕೊಟ್ಟಿದ್ದು, 2023ರ ಅವಧಿಯಲ್ಲಿ ಅನ್ಯಗ್ರಹ ಜೀವಿಗಳ ದಾಳಿ, ಸೋಲಾರ್ ಸುನಾಮಿಯಂತಹ ಅನೇಕ ಗಂಡಾತರಗಳಿಂದ ಜಗತ್ತು ನಾನಾ ರೀತಿಯ ತೊಂದರೆಗಳನ್ನು ಎದುರಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾನವನ ಮೆದುಳಿಗೆ ಚಿಪ್! – ಅಂಧರ ಪಾಲಿಗೆ ಆಶಾಕಿರಣವಾಗಲಿದ್ಯಾ ಎಲಾನ್ ಮಸ್ಕ್ ಹೊಸ ಪ್ರಾಜೆಕ್ಟ್

2023ರಲ್ಲಿ ಸೋಲಾರ್ ಸುನಾಮಿ ಸಂಭವಿಸುತ್ತದೆ. ಇದರ ಪರಿಣಾಮವಾಗಿ ಭೂಮಿಯ ಕಾಂತೀಯ ಕವಚವು ನಾಶವಾಗುತ್ತದೆ. ಭೂಮಿಯ ಮೇಲೆ ಏಲಿಯನ್‌ಗಳ (ಅನ್ಯಗ್ರಹ ಜೀವಿ) ದಾಳಿಯಿಂದ ಲಕ್ಷಾಂತರ ನಿವಾಸಿಗಳು ಸಾಯುತ್ತಾರೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ.

ಬಾಬಾ ವಂಗಾ ಅವರ 2023ರ ಭಯಾನಕ ಭವಿಷ್ಯವಾಣಿ, ಭೂಮಿಯು ಈಗ ಬ್ರಹ್ಮಾಂಡದಲ್ಲಿ ಅನಿಶ್ಚಿತ ಸಮತೋಲನದಲ್ಲಿ ಉಳಿದಿದೆ. ನಂತರ ಅದು ತನ್ನ ಕಕ್ಷೆಯನ್ನು ಬದಲಿಸುತ್ತದೆ. ಇದರಲ್ಲಿನ ಸಣ್ಣ ಬದಲಾವಣೆಯೂ ಹವಾಮಾನದಲ್ಲಿ ಭಾರಿ ಬದಲಾವಣೆ ಉಂಟುಮಾಡಬಹುದು. ಆಗ ಪರಿಸ್ಥಿತಿ ನಿಜಕ್ಕೂ ಭೀರಕವಾಗಿರುತ್ತದೆ ಎಂದು ಹೇಳಿದ್ದಾರೆ.

2023ರ ವೇಳೆಗೆ ಪ್ರಯೋಗಾಲಯಗಳಲ್ಲಿ ಮಾನವರನ್ನು ಉತ್ಪಾದಿಸಲಾಗುತ್ತದೆ. ಹುಟ್ಟದ ಮಗುವಿಗೆ ತಮ್ಮ ಆಯ್ಕೆಯ ಬಣ್ಣ ಮತ್ತು ಗುಣಲಕ್ಷಣಗಳನ್ನು ಆಯ್ಕೆ ಮಾಡುವ ಸಂದರ್ಭ ಬರುತ್ತದೆ. ಈ ಜನನದ ಪ್ರಕ್ರಿಯೆಯು ಮಾನವನ ನಿಯಂತ್ರಣದಲ್ಲಿರುತ್ತದೆ ಮತ್ತು ಬಾಡಿಗೆ ತಾಯ್ತನದ ಸಮಸ್ಯೆಯು ಅದರ ಆವಿಷ್ಕಾರದೊಂದಿಗೆ ಕೊನೆಗೊಳ್ಳುತ್ತದೆ. ವಿದ್ಯುತ್ ಸ್ಥಾವರದಲ್ಲಿನ ಸ್ಫೋಟವು ವಿಷಕಾರಿ ಮೋಡಗಳ ರಚನೆಗೆ ಕಾರಣವಾಗಬಹುದು. ಇದು ಇಡೀ ಏಷ್ಯಾ ಖಂಡವೇ ಮಂಜು ಕವಿಯುವಂತೆ ಮಾಡುತ್ತದೆ. ಈ ಬದಲಾವಣೆಯಿಂದಾಗಿ ಜಗತ್ತಿನ ಹಲವು ದೇಶಗಳಲ್ಲಿ ಗಂಭೀರ ಕಾಯಿಲೆಗಳು ಬಾಧಿಸುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

suddiyaana