ಸಿಕ್ಕಿಂನಲ್ಲಿ ಮೇಘಸ್ಪೋಟದಿಂದ 14 ಮಂದಿ ಸಾವು- ಪಶ್ಚಿಮ ಬಂಗಾಳದಲ್ಲಿಯೂ ಪ್ರವಾಹ

ಸಿಕ್ಕಿಂನಲ್ಲಿ ಮೇಘಸ್ಪೋಟದಿಂದ 14 ಮಂದಿ ಸಾವು- ಪಶ್ಚಿಮ ಬಂಗಾಳದಲ್ಲಿಯೂ ಪ್ರವಾಹ

ಕೋಲ್ಕತ್ತ: ಸಿಕ್ಕಿಂನಲ್ಲಿ ಸಂಭವಿಸಿರುವ ಮೇಘಸ್ಪೋಟದಿಂದಾಗಿ ತೀಸ್ತಾ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿದೆ. ಈ ಅವಘಡದಲ್ಲಿ ಸುಮಾರು  14 ಮಂದಿ ಮೃತಪಟ್ಟು 80ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಕ್ಕಿಂನಲ್ಲಿ ಸಂಭವಿಸಿರುವ ಮೇಘಸ್ಫೋಟದ ಪರಿಣಾಮ ಪಶ್ಚಿಮ ಬಂಗಾಳದಲ್ಲಿಯೂ ಆಗಿದೆ. ಉಭಯ ರಾಜ್ಯಗಳ ಗಡಿಯಲಿರುವ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ 10,000 ಜನರನ್ನು ರಕ್ಷಿಸಲಾಗಿದ್ದು, 19 ಜಿಲ್ಲೆಗಳಲ್ಲಿ ತೆರೆದಿರುವ 190 ಪರಿಹಾರ ಶಿಬಿರಗಳಲ್ಲಿ ಆಶ್ರಯ ನೀಡಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂದವಾಗಿ ಕಾಣಲು ಲೇಸರ್‌ ಟ್ರೀಟ್‌ಮೆಂಟ್‌! – ಚಿಕಿತ್ಸೆಗೆ ಒಳಗಾದ ನಿರೂಪಕಿಯ ಮುಖವೇ ಸುಟ್ಟು ಹೋಯ್ತು!

ಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಬ್ಯಾನರ್ಜಿ ಅವರು, ಮನೆಯಿಂದಲೇ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಹಾಗೆಯೇ, ಪ್ರವಾಹ ಪರಿಸ್ಥಿತಿಯ ನಿಯಂತ್ರಣದ  ಸಲುವಾಗಿ ರಾಜ್ಯ ಸರ್ಕಾರದ ನೌಕರರ ರಜೆಗಳನ್ನು ರದ್ದು ಮಾಡಿರುವುದಾಗಿ ಘೋಷಿಸಿದ್ದಾರೆ. ರಾಜ್ಯದ ಉತ್ತರ ಭಾಗದಲ್ಲಿನ ಪ್ರವಾಹಪೀಡಿತ ಜಿಲ್ಲೆಗಳಿಗೆ ಪಶ್ಚಿಮ ಬಂಗಾಳ ಗವರ್ನರ್ ಸಿ.ವಿ.ಆನಂದ ಬೋಸ್ ಗುರುವಾರ ಭೇಟಿ ನೀಡಲಿದ್ದಾರೆ. ಸಂತ್ರಸ್ತರು ದೂರು ದಾಖಲಿಸಲು ಕಂಟ್ರೋಲ್ ರೂಂ ತೆರೆಯುವಂತೆಯೂ ದ್ವಿವೇದಿ ಅವರಿಗೆ ನಿರ್ದೇಶನ ನೀಡಿದ್ದಾರೆ.

ರಾಜ್ಯ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು (ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್) ಸ್ಥಳಕ್ಕೆ ಧಾವಿಸಿವೆ. ನನ್ನ ಕಾಲಿನ ಗಾಯ ಸಂಪೂರ್ಣವಾಗಿ ವಾಸಿಯಾಗಲು ಇನ್ನೂ ಒಂದು ವಾರ ಬೇಕಿದ್ದು, ಮನೆಯಿಂದಲೇ 24/7 ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಲಿದ್ದೇನೆ’ ಎಂದು ಮಮತಾ ತಿಳಿಸಿದ್ದಾರೆ.

Shwetha M