ʼದಿವಾಳಿಯಾಗಿದ್ದು ದೇಶವೂ ಅಲ್ಲ, ರಾಜ್ಯವೂ ಅಲ್ಲ ಬಿಜೆಪಿಗರ ಬೌದ್ಧಿಕತೆ!ʼ – ಬಿಜೆಪಿಗೆ ಟಾಂಗ್‌ ಕೊಟ್ಟ ಕಾಂಗ್ರೆಸ್‌

ʼದಿವಾಳಿಯಾಗಿದ್ದು ದೇಶವೂ ಅಲ್ಲ, ರಾಜ್ಯವೂ ಅಲ್ಲ ಬಿಜೆಪಿಗರ ಬೌದ್ಧಿಕತೆ!ʼ – ಬಿಜೆಪಿಗೆ ಟಾಂಗ್‌ ಕೊಟ್ಟ ಕಾಂಗ್ರೆಸ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಶೀಘ್ರವೇ ಜಾರಿ ಮಾಡಬೇಕು. ಐದು ಗ್ಯಾರಂಟಿಗಳಿಂದ ದೇಶವೇ ದಿವಾಳಿಯಾಗುತ್ತದೆ ಎಂದು ಈ ಹಿಂದೆ ಬಿಜೆಪಿ ಹೇಳಿಕೆ ನೀಡಿತ್ತು.  ಈ ಹೇಳಿಕೆಗಳಿಗೆ ಕಾಂಗ್ರೆಸ್‌ ಟ್ವೀಟ್‌ ಮುಖಾಂತರ ತಿರುಗೇಟು ನೀಡಿದೆ.

ಇದನ್ನೂ ಓದಿ: ಅದೇ ಶುಕ್ರವಾರ.. ಅದೇ ಸಂಜೆಯ ಸಮಯ..! – ಮತ್ತೆ ದುರಂತ ಕಂಡ ಅದೇ ಕೋರಮಂಡಲ್ ಎಕ್ಸ್‌ಪ್ರೆಸ್‌..!

ಈ ಬಗ್ಗೆ ರಾಜ್ಯ ಕಾಂಗ್ರೆಸ್‌, ಬದಲಾಗುವ ಬಿಜೆಪಿ ವರಸೆಗಳು ಎಂಬ ಶೀರ್ಷಿಕೆಯಡಿ ಸರಣಿ ಟ್ವೀಟ್‌ ಮಾಡಿದೆ. ಗ್ಯಾರಂಟಿ ಘೋಷಣೆ ಮಾಡಿದಾಗ ಕಾಂಗ್ರೆಸ್‌ ನವರು ಹಣ ಹೇಗೆ ಹೊಂದಿಸುತ್ತಾರೆ, ಈ ಯೋಜನೆ ಜಾರಿ ಸಾಧ್ಯವಿಲ್ಲ, ಆರ್ಥಿಕತೆಯ ವಿರೋಧಿ ಎಂದು ಬಿಜೆಪಿ ಹೇಳಿತ್ತು. ಗ್ಯಾರಂಟಿ ಜಾರಿಯಾದಾಗ ಕಂಡೀಷನ್ ಹಾಕ್ತಿದಾರೆ, ಎಲ್ಲರಿಗೂ ಕಳ್ಳೆಪುರಿ ಹಂಚಿದ ಹಾಗೆ ಹಂಚಬೇಕು ಎಂದು ಹೇಳುತ್ತಾರೆ. ಬಿಜೆಪಿ ಯಾವ ನಿಲುವು ತಾಳಬೇಕು, ಹೇಗೆ ವಿರೋಧಿಸಬೇಕು ಎಂದು ಗೊಂದಲದಲ್ಲಿದೆ ಬಿಜೆಪಿ. ಕನಿಷ್ಠ ಸ್ಪಷ್ಟವಾಗಿ ವಿರೋಧಿಸಲಾದರೂ ಒಬ್ಬ ನಾಯಕನನ್ನು ಆಯ್ಕೆ ಮಾಡಿಕೊಳ್ಳಿ ಎಂದು ಬಿಜೆಪಿಗೆ ಕಾಂಗ್ರೆಸ್‌ ಟಾಂಗ್‌ ನೀಡಿದೆ.

“ಉದ್ಯೋಗ ಖಾತ್ರಿ ಕೊಟ್ಟಾಗ ದೇಶ ದಿವಳಿಯಾಗುತ್ತದೆ ಎಂದಿದ್ದರು. ಅನ್ನಭಾಗ್ಯ ಕೊಟ್ಟಾಗ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ಆದರೆ ದಿವಾಳಿಯಾಗಿದ್ದು ದೇಶವೂ ಅಲ್ಲ, ರಾಜ್ಯವೂ ಅಲ್ಲ ಬಿಜೆಪಿಗರ ಬೌದ್ಧಿಕತೆ! ಜನರಿಗೆ ನೀಡುವ ಹಣ, ಭೂಮಿಗೆ ಬಿತ್ತುವ ಬೀಜ ವ್ಯರ್ಥವಾಗುವುದಿಲ್ಲ, ಬೆಳೆದು ಮರವಾಗಿ ಅರ್ಥವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತದೆ” ಎಂದು ಕಾಂಗ್ರೆಸ್ ಹೇಳಿದೆ.

suddiyaana