ಮಣಿಪುರದಲ್ಲಿ ಹಿಂಸಾಚಾರ ತಡೆಗಟ್ಟಲು ಮತ್ತೆ ಐದು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ!  

ಮಣಿಪುರದಲ್ಲಿ ಹಿಂಸಾಚಾರ ತಡೆಗಟ್ಟಲು ಮತ್ತೆ ಐದು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ!  

ಜನಾಂಗೀಯ ಸಂಘರ್ಷದಲ್ಲಿ ಬೆಂದುಹೋಗಿರುವ ಮಣಿಪುರದಲ್ಲಿ ಮತ್ತೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಮಣಿಪುರದ ಎಲ್ಲಾ ಐದು ಕಣಿವೆ ಜಿಲ್ಲೆಗಳಲ್ಲಿ ಮತ್ತೆ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ.

ಮಣಿಪುರದಲ್ಲಿ ಹಿಂಸಾಚಾರ ತಣ್ಣಗಾಗಿರುವ ಹಿನ್ನೆಲೆ ಪ್ರತಿದಿನ ಬೆಳಿಗ್ಗೆ 5 ರಿಂದ ಸಂಜೆ 6 ರವರೆಗೆ ವಿಧಿಸಿದ್ದ ಕರ್ಫ್ಯೂವನ್ನು ತೆಗೆದುಹಾಕಲಾಗಿತ್ತು. ಆದರೆ ಮಣಿಪುರದ ಫೌಗಸ್ಟಾವೊ ಇಖ್ಯೆ ಪ್ರದೇಶದಲ್ಲಿ ಅಳವಡಿಸಲಾದ ಸೇನಾ ಬ್ಯಾರಿಕೇಡ್‌ಗಳನ್ನು ಬಲವಂತವಾಗಿ ಬೇಧಿಸಲು ಕಿಡಿಗೇಡಿಗಳು ಯೋಜನೆ ರೂಪಿಸಿದ್ದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.  ಈ ಹಿನ್ನೆಯಲ್ಲಿ ಬಿಷ್ಣುಪು, ಕಕ್ಕಿಂಗ್, ತೌಬಾಲ್, ಪೂರ್ವ ಮತ್ತು ಪಶ್ಚಿಮ ಇಂಫಾಲ್ ಜಿಲ್ಲೆಗಳಲ್ಲಿ ಈಗ ಸಂಪೂರ್ಣ ಕರ್ಫ್ಯೂ ಜಾರಿ ಮಾಡಲಾಗಿದೆ.

ಇದನ್ನೂ ಓದಿ:   ಹಿಂದೂ ಧರ್ಮ ಹುಟ್ಟಿದ್ದು ಯಾವಾಗ.. ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ! – ವಿವಾದಾತ್ಮಕ ಹೇಳಿಕೆ ನೀಡಿದ ಗೃಹ ಸಚಿವ ಪರಮೇಶ್ವರ್‌

ಸುದ್ದಿಗಾರರೊಂದಿಗೆ ಮಾತನಾಡಿದ, ಸರ್ಕಾರದ ವಕ್ತಾರ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಸಪಂ ರಂಜನ್, ಸೆಪ್ಟೆಂಬರ್ 6 ರಂದು ಟೋರ್ಬಂಗ್ ಬಳಿಯ ಫೌಗಸ್ಟಾವೊ ಇಖೈನಲ್ಲಿ ಸೇನಾ ಬ್ಯಾರಿಕೇಡ್‌ಗಳನ್ನು ಬೇಧಿಸುವ ಉದ್ದೇಶಿತ ಯೋಜನೆಯನ್ನು ತಡೆಯಲು ಸರ್ಕಾರವು ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿಗೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಮನ್ವಯ ಸಮಿತಿ ಮಾಧ್ಯಮ ಕಾರ್ಯದರ್ಶಿ ಸೊಮೆಂಡೊ ತೊಕ್ಕೊಮ್, ಆಗಸ್ಟ್ 30ರಂದೇ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಲು ಸರ್ಕಾರಕ್ಕೆ ಸೂಚಿಸಲಾಗಿತ್ತು. ಈಗ ಬ್ಯಾರಿಕೇಡ್ ಬೇಧಿಸಲು ಜನರು ಮುತ್ತಿಗೆ ಹಾಕಿ, ಏನಾದರೂ ಅಹಿತಕರ ಘಟನೆ ನಡೆದರೆ ಮಣಿಪುರ ಸರ್ಕಾರವೇ ಸಂಪೂರ್ಣ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.

suddiyaana