ರಾಜ್ಯದಲ್ಲಿ ಬರದ ಛಾಯೆ – ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ ಬೆಲೆ!

ರಾಜ್ಯದಲ್ಲಿ ಬರದ ಛಾಯೆ – ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ ಬೆಲೆ!

ಬೆಂಗಳೂರು: ರಾಜ್ಯದಲ್ಲಿ ಟೊಮೆಟೋ ಬಳಿಕ ಈರುಳ್ಳಿ ಬೆಲೆ ಗಗನಕ್ಕೇರುತ್ತಿದೆ.  ಕಳೆದ ವಾರ 30 ರಿಂದ 40 ರೂಪಾಯಿ ಇದ್ದ ಈರುಳ್ಳಿ ಬೆಲೆ, ಈಗ 80 ರಿಂದ 90 ರೂ.ಗೆ ತಲುಪಿದ್ದು, ಬೆಲೆ ಏರಿಕೆಯಿಂದಾಗಿ ಗ್ರಾಹಕರಿಗೆ ಕಣ್ಣೀರು ತರಿಸುವಂತೆ ಆಗಿದೆ.

ತಿಂಗಳ ಹಿಂದೆಯೇ ಈರುಳ್ಳಿ ಬೆಲೆ ಗಗನಕ್ಕೇರಲಿದೆ ಎನ್ನುವ ಸುಳಿವು ಸಿಕ್ಕಿತ್ತು. ಆದ್ರೆ ಕೇಂದ್ರ ಸರ್ಕಾರ ಈರಳ್ಳಿ ರಫ್ತಿಗೆ ಲಗಾಮುಹಾಕಿತ್ತು. ಹೆಚ್ಚೆಚ್ಚು ದಾಸ್ತಾನ ಮಾರುಕಟ್ಟೆಗೆ ಬಿಡುಗಡೆ ಮಾಡಿ ಬೆಲೆ ಹೆಚ್ಚಾಗದಂತೆ ನೋಡಿಕೊಂಡಿತ್ತು. ಆದ್ರೆ, ಇದೀಗ ಮಳೆ ಅಭಾವದಿಂದ ನಿರೀಕ್ಷಿತ ಫಸಲು ಬಾರದ ಕಾರಣ, ಹೆಚ್ಚು ಪ್ರಮಾಣದಲ್ಲಿ ಈರುಳ್ಳಿ ಆಮದು ಆಗದಿರೋ ಹಿನ್ನೆಲೆ ಈರುಳ್ಳಿ ದರವು ಗಗನಕ್ಕೇರುತ್ತಿದೆ.

ಇದನ್ನೂ ಓದಿ: ಬ್ಯಾಂಕ್‌ ಉದ್ಯೋಗಿಳಿಗೆ ಗುಡ್‌ ನ್ಯೂಸ್‌ – ಇನ್ನು ಮುಂದೆ ವಾರದಲ್ಲಿ 5 ದಿನ ಮಾತ್ರ ಕೆಲಸ!

ಬೆಂಗಳೂರು ನಗರದಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಪ್ರತಿ ಕೆಜಿಗೆ 80 ರಿಂದ 90 ರೂಪಾಯಿಗೆ ತಲುಪಿದೆ. ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳಿವೆ. ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಬೇಡಿಕೆಗೆ ಅನುಗುಣವಾಗಿ ಮಾರುಕಟ್ಟೆಗಳಿಗೆ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಕೆಲ ಪ್ರದೇಶಗಳಲ್ಲಿ ಬಿತ್ತನೆ ವಿಳಂಬವಾಗಿದ್ದು, ಇನ್ನೂ ಫಸಲು ಬಂದಿಲ್ಲ. ಪರಿಣಾಮ, ಬೆಲೆ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ದರವು ಶೇ. 57ರಷ್ಟು ಹೆಚ್ಚಳವಾಗಿದೆ.

ಯಶವಂತಪುರ ಎಪಿಎಂಸಿಯಲ್ಲಿ ಪ್ರತಿ ಕೆ.ಜಿ 60 ರಿಂದ 65 ರೂಪಾಯಿ ಇದೆ. ನ್ಯೂ ತರಗುಪೇಟೆಯಲ್ಲಿ ಪ್ರತಿ ಕೆಜಿ ಈರುಳ್ಳಿ ಬೆಲೆ 75ರಿಂದ 90 ರೂಪಾಯಿ ಇದೆ. ಹಾಪ್‌ಕಾಮ್ಸ್‌ಗಳಲ್ಲಿ ಕೆ.ಜಿ ಈರುಳ್ಳಿಯನ್ನು 70 ರಿಂದ 88 ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿಗೆ ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಲೋಡ್‌ ಈರುಳ್ಳಿ ಬರುತ್ತಿತ್ತಂತೆ. ಆದ್ರೆ, ಈಗ ಆದ್ರೀಗ ದಿನಕ್ಕೆ 100ರಿಂದ 200 ಲೋಡ್ ಮಾತ್ರ ಬರುತ್ತಿದೆ. ವ್ಯಾಪಾರಸ್ಥರು ಹೇಳುವ ಪ್ರಕಾರ ಇನ್ನೂ ಒಂದೆರಡು ತಿಂಗಳು ಈರುಳ್ಳಿ ಬೆಲೆ ಕಡಿಮೆಯಾಗುವುದು ಅನುಮಾನ ಎನ್ನಲಾಗಿದೆ.

Shwetha M