ಶಿಕ್ಷಕನಿಂದ ಮಾನಹಾನಿ ಮೆಸೇಜ್ – ಮನನೊಂದು ವಿಷ ಸೇವಿಸಿದ ಹುಡುಗಿ ಕೊನೆಗೂ ಬದುಕಲಿಲ್ಲ..!

ಶಿಕ್ಷಕನಿಂದ ಮಾನಹಾನಿ ಮೆಸೇಜ್ – ಮನನೊಂದು ವಿಷ ಸೇವಿಸಿದ ಹುಡುಗಿ ಕೊನೆಗೂ ಬದುಕಲಿಲ್ಲ..!

ಶಿಕ್ಷಕರು ವಿದ್ಯಾರ್ಥಿಗಳಿಗೆ ದೇವರ ಸಮಾನ. ಶಿಕ್ಷಕರಿಂದ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುತ್ತದೆ. ಆದರೆ, ಇಲ್ಲೊಬ್ಬ ಶಿಕ್ಷಕ ಮಹಾಶಯನಿಂದ ಬಾಳಿ ಬದುಕಬೇಕಾದ ಜೀವವೊಂದು ತನ್ನ ಬದುಕನ್ನೇ ಮುಗಿಸಿಕೊಂಡಿದೆ. ಅರಳುವ ಮೊದಲೇ ಅಪ್ಪ ಅಮ್ಮನ ಮುದ್ದಾದ ಹೂ ಮೊಗದ ಮಗಳು ಇಹಲೋಕದ ಯಾತ್ರೆಯನ್ನು ಮುಗಿಸಿದ್ದಾಳೆ.

ಇದನ್ನೂ ಓದಿ: ಪ್ರವಾಸಿಗರ ವಾಹನದ ಮೇಲೆ ದಾಳಿಗೆ ಮುಂದಾದ ಕಾಡಾನೆ! – ಆಮೇಲೆ ಏನಾಯ್ತು ಗೊತ್ತಾ?

ಶಿಕ್ಷಕರೊಬ್ಬರು ತನ್ನ ಕುರಿತು ಮತ್ತೊಬ್ಬ ವಿದ್ಯಾರ್ಥಿನಿಗೆ ಮಾನಹಾನಿ ಮೆಸೇಜ್ ಮಾಡಿದ ಹಿನ್ನೆಲೆ ಮನನೊಂದ ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. SDM ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮೆಸೇಜ್ ಕಳುಹಿಸಿದ ಶಿಕ್ಷಕನಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ SDM School ನ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತನ್ನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮಾನಹಾನಿ ಮೆಸೇಜ್ ಮಾಡಿ ವಿಚಾರ ತಿಳಿದ 10ನೇ ತರಗತಿ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಶಾಲೆಗೆ ತೆರಳಿ ವಿಚಾರಿಸಲಾಗಿತ್ತು. ಫೆಬ್ರವರಿ 7 ರಂದು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ ಬಿಸ್ಕೆಟ್ ಪ್ಯಾಕೇಟ್ ಜೊತೆಗೆ ಇಲಿ ಪಾಷಾಣ ಕೂಡ ಖರೀದಿಸಿ ಕೊಂಡು ಹೋಗಿದ್ದಳು. ಬಳಿಕ, ಶಾಲೆಯಲ್ಲಿ ಬಿಸ್ಕೆಟ್‌ಗೆ ಇಲಿ ಪಾಷಾಣ ಲೇಪಿಸಿ ಸೇವನೆ ಮಾಡಿದ್ದಾಳೆ. ಇದರಿಂದ ಆಕೆ ಅಸ್ವಸ್ಥಗೊಂಡಿದ್ದು, ಕೂಡಲೇ ಶಿಕ್ಷಕರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಿಡ್ನಿ, ಲಿವರ್ ನಿಷ್ಕ್ರಿಯಗೊಂಡಿದ್ದರಿಂದ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಪ್ರಕರಣ ಸಂಬಂಧ ಮೃತ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಅನ್ವಯ ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿ ರೂಪೇಶ್ ಪೂಜಾರಿ ವಿರುದ್ಧ ಐಪಿಸಿ 354D, 509, POSO Act 12, 75JJ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Sulekha