ರೇಣುಕಾಸ್ವಾಮಿ ಮರ್ಡರ್‌ ಕೇಸ್‌.. ಡಿ ಗ್ಯಾಂಗ್‌ ವಿರುದ್ಧ ಮತ್ತೊಂದು ಸಾಕ್ಷಿ! – ಕಾರಿನಲ್ಲಿ ನಡೆದಿದ್ದು ಏನು?

ರೇಣುಕಾಸ್ವಾಮಿ ಮರ್ಡರ್‌ ಕೇಸ್‌.. ಡಿ ಗ್ಯಾಂಗ್‌ ವಿರುದ್ಧ ಮತ್ತೊಂದು ಸಾಕ್ಷಿ! – ಕಾರಿನಲ್ಲಿ ನಡೆದಿದ್ದು ಏನು?

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಹಲವರು ಜೈಲು ಸೇರಿದ್ದಾರೆ. ಪ್ರಕರಣದ ತನಿಖೆ ಕೂಡ ಬಿರುಸಿನಿಂದ ಸಾಗುತ್ತಿದೆ.  ಆರೋಪಿಗಳ ವಿರುದ್ಧ ಒಂದೊಂದೇ ಸಾಕ್ಷ್ಯಗಳನ್ನು ಪೊಲೀಸರು ತನಿಖೆಯಿಂದ ಪತ್ತೆ ಹಚ್ಚುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹ್ವತ್ವದ ಮಾಹಿತಿ ಹೊರ ಬಿದ್ದಿದೆ.

ಇದನ್ನೂ ಓದಿ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾಮಗಾರಿಗೆ ಅಡ್ಡಿ – ಮೊದಲ ಯತ್ನ ವಿಫಲ!

ರೇಣುಕಾಸ್ವಾಮಿ ಕೊಲೆಯಾಗಿ ಎರಡು ತಿಂಗಳಾಗುತ್ತಾ ಬಂದಿದೆ. ಈಗಾಗಲೇ ಪ್ರಕರಣ ಸಂಬಂಧ ನೂರಾರು ಸಾಕ್ಷಿಗಳು ಸಿಕ್ಕಿವೆ. ದರ್ಶನ್‌, ಪವಿತ್ರಾ ಗೌಡ ವಿರುದ್ಧ ಬಲವಾದ ಸಾಕ್ಷಿಗಳು ಲಭಿಸಿವೆ. ಇದೀಗ ಮತ್ತೊಂದು ಮಹತ್ವದ ಸಾಕ್ಷಿ ಸಿಕ್ಕಿದೆ. ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಬಳಿಕ ಮೃತದೇಹವನ್ನು ಆರೋಪಿಗಳಾದ ನಿಖಿಲ್, ರಾಘವೇಂದ್ರ, ಕಾರ್ತಿಕ್ ಕಾರಿನಲ್ಲಿ ಸಾಗಾಟ ಮಾಡಿದ್ದರು. ಕಾರನ್ನು ಪರಿಶೀಲನೆ ಮಾಡುವಾಗ ಪೊಲೀಸರಿಗೆ ಕೂದಲು ಸಿಕ್ಕಿತ್ತು. ಈ ಕುರಿತು ಪೊಲೀಸರು ಕೆಲ ಮಾಹಿತಿಗಳನ್ನು ಸಂಗ್ರಹ ಮಾಡಿದ್ದರು. ಬಳಿಕ ಆರೋಪಿಗಳ ಕೂದಲು ಮಾದರಿಯನ್ನು ಎಫ್ಎಸ್ಎಲ್​ಗೆ ಕಳುಹಿಸಿ ಕೊಟ್ಟಿದ್ದರು. ಇದರ ರಿಪೋರ್ಟ್​ ಪೊಲೀಸರ ಕೈಸೇರಿದೆ.

ಎಫ್ಎಸ್ಎಲ್​ನಿಂದ ವರದಿ ಬಂದಿದ್ದು ಕಾರಿನಲ್ಲಿ ರೇಣುಕಾಸ್ವಾಮಿ ಮೃತದೇಹ ಸಾಗಾಟ ಮಾಡಿರೋದು ದೃಢವಾಗಿದೆ. ಮೃತದೇಹ ಸಾಗಿಸಿದ್ದ ಅರೋಪಿಗಳಾದ ನಿಖಿಲ್, ರಾಘವೇಂದ್ರ, ಕಾರ್ತಿಕ್ ಅವರ ಕೂದಲು ಅನ್ನೋದು ವರದಿಯಿಂದ ಕನ್ಫರ್ಮ್ ಆಗಿದೆ. ಇದರಿಂದಾಗಿ ದರ್ಶನ್‌ ಹಾಗೂ ಅವರ ಸಂಗಡಿಗರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

Shwetha M

Leave a Reply

Your email address will not be published. Required fields are marked *