4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಡಿವೋರ್ಸ್‌ ಗೆ ಇದೇ ಕಾರಣ?

4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಡಿವೋರ್ಸ್‌ ಗೆ ಇದೇ ಕಾರಣ?

ಟೀಮ್‌ ಇಂಡಿಯಾ ಸ್ಟಾರ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ ಮತ್ತು ಧನಶ್ರೀ ವರ್ಮಾ ಕೆಲ ದಿನಗಳಿಂದ ಡಿವೋರ್ಸ್ ಪಡೆಯಲಿದ್ದಾರೆ ಎಂದ ಸುದ್ದಿಯಾಗುತ್ತಿತ್ತು. ಆದರೆ ಅಧಿಕೃತವಾಗಿ ಇಬ್ಬರೂ ತಿಳಿಸಿರಲಿಲ್ಲ. ಇದೀಗ ಅಧಿಕೃತವಾಗಿ ಡಿವೋರ್ಸ್‌ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮೊದಲ ಪಂದ್ಯದ ಭಾರತಕ್ಕೆ ಭರ್ಜರಿ ಜಯ – ಬಾಂಗ್ಲಾಕ್ಕೆ ಬಿಗ್ ಶಾಕ್ ನೀಡಿದ ಭಾರತ

ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್‌ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

ತಮ್ಮ ವಿಚ್ಛೇದನದ ಹಿಂದಿನ ಕಾರಣದ ಬಗ್ಗೆ ಪ್ರಶ್ನಿಸಿದಾಗ, ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದಾರೆ. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು. ಡಿವೋರ್ಸ್‌ ಪಡೆದ ನಂತರ ಚಹಲ್‌ ಕೈಮಗಿಯುತ್ತಿರುವ ಹನುಮಂತನ ಚಿತ್ರ ಪ್ರಕಟಿಸಿದ್ದರೆ ಧನಶ್ರೀ ಇನ್‌ಸ್ಟಾದಲ್ಲಿ ಭಾವನಾತ್ಮಕ ಪೋಸ್ಟ್‌ ಪ್ರಕಟಿಸಿದ್ದಾರೆ.

ಇನ್‌ಸ್ಟಾದಲ್ಲಿ ಚಹಲ್‌ ದೇವರು ನನ್ನನ್ನು ಎಷ್ಟೋ ಬಾರಿ ಕಾಪಾಡಿದ್ದಾನೆ. ನಾನು ಅವುಗಳನ್ನು ಸಂಖ್ಯೆಯಲ್ಲಿ ಎಣಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ದೇವರು ನನ್ನ ಅರಿವಿಗೆ ಬಾರದೆಯೋ ನನ್ನ ಜೊತೆ ನಿಂತಿದ್ದಾನೆ. ನನಗೆ ತಿಳಿಯದೇ ನನ್ನನ್ನು ಬೆಂಬಲಿಸಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಧನಶ್ರೀ ಅವರು ಒತ್ತಡದಿಂದ ಅದೃಷ್ಟಶಾಲಿಯಾಗುವವರೆಗೆ. ದೇವರು ನಮ್ಮ ಒತ್ತಡವನ್ನು ಸಂತೋಷವಾಗಿ ಪರಿವರ್ತಿಸುವ ರೀತಿ ಎಷ್ಟು ಅದ್ಭುತವಾಗಿದೆ? ಇಂದು ನೀವು ಯಾವುದಾದರೂ ವಿಷಯದ ಬಗ್ಗೆ ಒತ್ತಡಕ್ಕೆ ಒಳಗಾದರೆ ಹೆಚ್ಚು ಯೋಚಿಸುತ್ತಿದ್ದರೆ, ನಿಮಗೆ ಒಂದು ಆಯ್ಕೆ ಇದೆ ಎಂಬುದನ್ನು ನೆನಪಿಡಿ. ನೀವು ಆ ಉದ್ವೇಗವನ್ನು ತೆಗೆದುಕೊಳ್ಳಬಹುದು ಅಥವಾ ನಿಮ್ಮ ಎಲ್ಲಾ ಚಿಂತೆಗಳನ್ನು ದೇವರಿಗೆ ಅರ್ಪಿಸಿ ಎಲ್ಲದಕ್ಕೂ ಪ್ರಾರ್ಥಿಸಬಹುದು. ದೇವರು ನಿಮ್ಮ ಒಳಿತಿಗಾಗಿ ಎಲ್ಲವನ್ನೂ ಮಾಡಬಹುದು ಎಂದು ನಂಬುವುದರಲ್ಲಿ ಬೇರೆಯದೇ ರೀತಿಯ ಶಕ್ತಿಯಿದೆ ಎಂಬುದಾಗಿ ಬರೆದುಕೊಂಡಿದ್ದಾರೆ.

Shwetha M