ಆಪರೇಷನ್ ಸಿಂಧೂರಗೆ ಪ್ರತಿಯಾಗಿ ಭಾರತದ ಮೇಲೆ ದಾಳಿ – ಪಾಕ್ ನ 3 ಯುದ್ಧ ವಿಮಾನ, 50 ಮಿಸೈಲ್​ ಢಮಾರ್!

ಆಪರೇಷನ್ ಸಿಂಧೂರಗೆ ಪ್ರತಿಯಾಗಿ ಭಾರತದ ಮೇಲೆ ದಾಳಿ – ಪಾಕ್ ನ 3 ಯುದ್ಧ ವಿಮಾನ, 50 ಮಿಸೈಲ್​ ಢಮಾರ್!

ಭಾರತ ಮತ್ತು ಪಾಕಿಸ್ತಾನದ ನಡುವೆ ಪ್ರತೀಕಾರದ ಸಮರ ಈಗ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಪಾಕ್‌ ಮತ್ತು ಅಲ್ಲಿನ ಜನತೆ ತತ್ತರಿಸಿದೆ. ಗುರುವಾರ ರಾತ್ರಿ ಜಮ್ಮುವಿನ ಮೇಲೆ ಪಾಕ್‌ 100 ಕ್ಷಿಪಣಿಗಳ ದಾಳಿ ನಡೆಸಿದ ಬಳಿಕ ಭಾರತ ಪ್ರತೀಕಾರದ ತೀವ್ರತೆಯನ್ನ ಹೆಚ್ಚಿಸಿದೆ.

ಇದನ್ನೂ ಓದಿ: ಭಾರತ ಮತ್ತು ಪಾಕ್ ನಡುವೆ ಯುದ್ಧ ಶುರು?- ಭಾರತದ ದಾಳಿಗೆ ಕಂಗೆಟ್ಟ ಶತ್ರುದೇಶ

ಗುರುವಾರ ತಡರಾತ್ರಿ ಜಮ್ಮುವಿನಲ್ಲಿ ಪಾಕ್‌ 100 ಕ್ಷಿಪಣಿಗಳ ದಾಳಿ ನಡೆಸಿತ್ತು. ಭಾರತೀಯ ಸೇನೆ ಇದುವರೆಗೆ ಪಾಕಿಸ್ತಾನದ 50ಕ್ಕೂ ಹೆಚ್ಚು ಡ್ರೋನ್‌ ದಾಳಿಯನ್ನು ಭಾರತೀಯ ವಿಫಲಗೊಳಿಸಿದೆ. ಭಾರತೀಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಹಾಗೂ ವಿವಿಧ ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್‌ ದಾಳಿ ನಡೆಸಿತ್ತು. ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲ, ಜಲಂಧರ್, ಲುಧಿಯಾನ, ಆದಂಪುರ, ಬಟಿಂಡಾ, ಚಂಡೀಗಢ, ನಾಲ್, ಫಲೋಡಿ, ಉತ್ತರಲೈ, ಭುಜ್ ಸೇರಿ ಒಟ್ಟು 15 ನಗರಗಳ ಮೇಲೂ ದಾಳಿಗೆ ಸಂಚುಮಾಡಿತ್ತು. ಆದ್ರೆ ಭಾರತೀಯ ಸೇನೆ ಎಲ್ಲಾ ದಾಳಿಯನ್ನ ವಿಫಲಗೊಳಿಸಿದೆ.

ಮೇ 7 ರಂದು ಭಾರತ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿದ್ದ 9 ಭಯೋತ್ಪಾದಕರ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಉಗ್ರರನ್ನು ಧ್ವಂಸಮಾಡಿದೆ, ಇದಕ್ಕೆ ಪ್ರತಿಯಾಗಿ ಪಾಕ್ ಭಾರತದ ಅಮಾಯಕ ನಾಗರಿಕರ ಮೇಲೆ ದಾಳಿ ಮಾಡಿ 16 ಜನರನ್ನು ಕೊಂದಿದೆ. ಅಲ್ಲದೆ ಉದ್ಧಟತನ ತೋರಿರುವ ಪಾಕಿಸ್ತಾನ ಸೈನ್ಯ  ಕ್ಷಿಪಣಿ ದಾಳಿ ಮಾಡಿದೆ. ಜಮ್ಮುವಿನ ಮೇಲೆ ದಾಳಿ ಮುಂದುವರಿಸಿದೆ. ಭಾರತ ಪ್ರತಿದಾಳಿ ಮಾಡಿ, ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದೆ.

ಇನ್ನೂ ಲೈನ್ ಆಫ್ ಕಂಟ್ರೋಲ್ ಬಳಿ ಉದ್ವಿಗ್ನತೆ ಹೆಚ್ಚಾಗಿದೆ, ಜಮ್ಮುವಿನ ಪೂಂಚ್ ಹಾಗೂ ರಜೌರಿ ಜಿಲ್ಲೆಗಳಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಜನರಿಗೆ ಧೈರ್ಯ ತುಂಬಿದ್ದು, ಜನರು ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ. ಲೈಟ್ ಆಫ್ ಮಾಡಿ, ಕಿಟಕಿಗಳಿಗೆ ಪರದೆ ಹಾಕಿ ಎಂದು ಹೇಳಿದ್ದಾರೆ.

ಅಮೃತಸರ DPRO ಮಾತನಾಡಿ, ಯಾವುದೇ ಕಾರಣಕ್ಕೂ ಭಯಪಡಬೇಡಿ. ಸೈರನ್ ಮೊಳಗುತ್ತದೆ. ಪರಿಸ್ಥಿತಿ ತಿಳಿಯಾದ ನಂತರ ಮತ್ತೆ ಸಂದೇಶ ರವಾನಿಸುತ್ತೇವೆ. ನಮ್ಮ ಸೈನಿಕರು ಕಾರ್ಯಪ್ರವೃತ್ತರಾಗಿದ್ದಾರೆ. ನಾವೆಲ್ಲರೂ ಮನೆಯಲ್ಲಿಯೇ ಇದ್ದು ಅವರಿಗೆ ಬೆಂಬಲ ನೀಡಬೇಕು. ಭಯಪಡುವ ಅಗತ್ಯವಿಲ್ಲ,” ಎಂದು ಅವರು ಹೇಳಿದ್ದಾರೆ. ಈ ಮಾತನ್ನು ಅವರು ನೇರವಾಗಿ ಹೇಳಿದ್ದಾರೆ.

Shwetha M

Leave a Reply

Your email address will not be published. Required fields are marked *