ಚೇನಾಬ್ ನದಿಯ ಹರಿವು ತಡೆದ ಭಾರತ – ಪಾಪಿ ಪಾಕಿಸ್ತಾನದಲ್ಲಿ ನೀರಿಗಾಗಿ ಹಾಹಾಕಾರ!

ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಲು ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಅದರಲ್ಲಿ ಸಿಂಧೂ ಜಲ ಒಪ್ಪಂದ ಕೂಡ ಒಂದು. ಭಾರತವು ಸಿಂಧೂ ನದಿ ಒಪ್ಪಂದ ರದ್ದು ಮಾಡಿದ್ದರಿಂದ ಈಗ ಪಾಪಿ ಪಾಕಿಸ್ತಾನ ಕಂಗೆಟ್ಟು ಹೋಗಿದೆ. ಇದೀಗ ಪಾಕ್ನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ.
ಇದನ್ನೂ ಓದಿ: ಮುಂಬೈ ವಿರುದ್ಧ ಪಂಜಾಬ್ ಕಿಂಗ್ಸ್ಗೆ ಜಯ – 11 ವರ್ಷದ ಬಳಿಕ ಫೈನಲ್ಗೆ ಎಂಟ್ರಿ
ಸಿಂಧೂ ಜಲ ಒಪ್ಪಂದವನ್ನ ಭಾರತ ರದ್ದು ಮಾಡಲಾಗಿದ್ದು, ಚೇನಾಬ್ ನದಿಯಿಂದ ಪಾಕಿಸ್ತಾನಕ್ಕೆ ಹೋಗುವ ನೀರನ್ನ ತಡೆಹಿಡಿಯಲಾಗಿದೆ. ಇದ್ದಿಂದಾಗಿ ಪಾಕ್ ನ ಅಣೆಕಟ್ಟುಗಳು ಖಾಲಿ ಖಾಲಿಯಾಗಿವೆ. ಇದರ ಪರಿಣಾಮ ಪಾಕಿಸ್ತಾನದಿಂದ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇಷ್ಟೇ ಅಲ್ಲದೆ, ಬೆಳೆಗಳು ಕೂಡ ಅಪಾಯದಲ್ಲಿವೆ. ಈಗಾಗಲೇ ದೇಶ ದೇಶಗಳಲ್ಲಿ ಭಿಕ್ಷಾಟನೆ ಮಾಡಿ ಬದುಕು ಸಾಗಿಸುತ್ತಿರುವ ಪಾಕಿಸ್ತಾನದಲ್ಲಿ ಬಿತ್ತನೆ ಕಾಲ ಬಂದಾಗ ಪರಿಸ್ಥಿತಿ ತೀರಾ ಕೆಟ್ಟದಾಗಿರಲಿದೆ. ಭಾರತ ಸಿಂಧೂ ನದಿ ನೀರು ಒಪ್ಪಂದ ಸ್ಥಗಿತಗೊಳಿಸಿದ ನಂತರ ಪಾಕಿಸ್ತಾನದ ಪರಿಸ್ಥಿತಿ ಹದಗೆಟ್ಟಿದೆ. ದೇಶದ ಅನೇಕ ದೊಡ್ಡ ಅಣೆಕಟ್ಟುಗಳು ಬತ್ತಿ ಹೋಗುವ ಅಂಚಿಗೆ ತಲುಪಿವೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ, ಭಾರತವು ಸಿಂಧೂ ನದಿ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ. ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿತ್ತು. ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು.
ತಜ್ಞರ ಪ್ರಕಾರ, ಖಾರಿಫ್ ಬೆಳೆ ಬಿತ್ತನೆ ಅವಧಿಯಲ್ಲಿ ನೀರಿನ ಕೊರತೆಯು ಪಾಕಿಸ್ತಾನದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ದೇಶದ ಎರಡು ಪ್ರಮುಖ ಅಣೆಕಟ್ಟುಗಳಾದ ಝೀಲಂ ನದಿಯ ಮಂಗಳ ಅಣೆಕಟ್ಟು ಮತ್ತು ತರ್ಬೇಲಾ ಅಣೆಕಟ್ಟುಗಳಲ್ಲಿ ನೀರಿನ ಮಟ್ಟದಲ್ಲಿ ತೀವ್ರ ಕುಸಿತ ಕಂಡುಬಂದಿದೆ. ಇದಲ್ಲದೆ, ಭಾರತವು ಚೆನಾಬ್ ನದಿಯ ನೀರಿನ ಹರಿವನ್ನು ಕಡಿಮೆ ಮಾಡಿರುವುದರಿಂದ ತೊಂದರೆ ಹೆಚ್ಚಿದೆ.