ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

ಸ್ಯಾಂಡಲ್ವುಡ್ ನಟ, ನಿರ್ದೇಶಕ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. ಸೊಸೆ ಪವಿತ್ರಾ ಮೂವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಇದನ್ನೂ ಓದಿ: ಪಿತೃ ಪಕ್ಷದಲ್ಲಿ ಆಹಾರವನ್ನು ಕಾಗೆ ಮುಟ್ಟದೇ ಇದ್ದರೆ ಅಥವಾ ಕಾಗೆ ಬಾರದೇ ಇದ್ದರೆ ಏನು ಮಾಡಬೇಕು.?
ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ಗುರುವಾರ (ಸೆ.11) ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದರು. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಿದ್ದರು. ಇದೀಗ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಮೂರು ದಿನದೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಈಗಾಗಲೇ ಪವಿತ್ರಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರ್.ಆರ್.ನಗರದಲ್ಲಿರುವ ಎಸ್.ನಾರಾಯಣ್ ನಿವಾಸದಲ್ಲಿ ಮಹಜರು ನಡೆಸಿದ್ದಾರೆ. ಜೊತೆಗೆ ಮಹಜರು ವೇಳೆ ಎಸ್.ನಾರಾಯಣ್ ಹಾಗೂ ಕುಟುಂಬಸ್ಥರಿಂದ ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇನ್ನೂ ದೂರು ನೀಡಿರುವ ಪವಿತ್ರಾ ಅವರಿಗೂ ಕೂಡ ಪೊಲೀಸರು ನೋಟಿಸ್ ನೀಡಿದ್ದು, ದೂರಿನಲ್ಲಿ ಉಲ್ಲೇಖಿಸಿದಂತೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ತಿಳಿಸಿದ್ದಾರೆ.

ನೋಡಿರಿ

