RJD-ಕಾಂಗ್ರೆಸ್ ಆಡಳಿತದಲ್ಲಿ ರೇಷನ್ ಲೂಟಿ ಆಗಿದೆ – ಯೋಗಿ ಆದಿತ್ಯನಾಥ್

RJD-ಕಾಂಗ್ರೆಸ್ ಆಡಳಿತದಲ್ಲಿ ರೇಷನ್ ಲೂಟಿ ಆಗಿದೆ – ಯೋಗಿ ಆದಿತ್ಯನಾಥ್

ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್ ಅವರು ಆರ್ಜೆಡಿ-ಕಾಂಗ್ರೆಸ್ ಆಡಳಿತದಲ್ಲಿ ರೇಷನ್ ಲೂಟಿ ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ, ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಹಾರದಲ್ಲಿ ಚುನಾವಣಾ ರ್ಯಾಲಿಗಳನ್ನು ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಪಾಟ್ನಾದಲ್ಲಿ ಬೃಹತ್ ರೋಡ್‌ಶೋ ನಡೆಸಿದರು.

ಇದನ್ನೂ ಓದಿ: ಡಿ ಗ್ಯಾಂಗ್‌ಗೆ ಮತ್ತೆ ಕೋರ್ಟ್ ಶಾಕ್ – ನ.10ಕ್ಕೆ ದರ್ಶನ್‌, ಪವಿತ್ರಾ ವಿಚಾರಣೆ ಮುಂದೂಡಿಕೆ

ಬಿಹಾರ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಆರ್ಜೆಡಿ-ಕಾಂಗ್ರೆಸ್ ಆಡಳಿತದಲ್ಲಿ ಬಡವರಿಗಾಗಿ ಮೀಸಲಾಗಿದ್ದ ರೇಷನ್ ಲೂಟಿ ಆಗಿದೆ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಮತ್ತು ಅಖಿಲೇಶ್ ಯಾದವ್ ಅವರನ್ನು ಮಹಾತ್ಮ ಗಾಂಧಿಯವರ ಮೂರು ಹೊಸ ಕೋತಿಗಳಿಗೆ ಹೋಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕೂಡ ಬಿಹಾರದಲ್ಲಿ ಸಾರ್ವಜನಿಕ ರ್ಯಾಲಿಗಳನ್ನು ನಡೆಸಲಿದ್ದಾರೆ. ಪ್ರಧಾನಿ ಅವರು ಸಹರ್ಸಾ ಮತ್ತು ಕಟೀಹಾರ್ ಜಿಲ್ಲೆಗಳಲ್ಲಿ ರ್ಯಾಲಿ ನಡೆಸಲಿದ್ದರೆ, ಶಾ ಅವರು ಶೇಖರ್, ಸೀತಾಮರ್ಹಿ ಮತ್ತು ಮಧುಬನಿಗಳಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವೈಶಾಲಿಯಲ್ಲಿ ರ್ಯಾಲಿ ನಡೆಸಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋನ್‌ಬರ್ಸಾ ಮತ್ತು ಲಖಿಸರಾಯಿಯಲ್ಲಿ ಎರಡು ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ರೋಸೆರಾದಲ್ಲಿ ರೋಡ್‌ಶೋ ನಡೆಸಲಿದ್ದಾರೆ.

Kishor KV