ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಮೋದಿಯಿಂದ ಹಸಿರು ನಿಶಾನೆ

ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಮೋದಿಯಿಂದ ಹಸಿರು ನಿಶಾನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬನಾರಸ್-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಹೊಸ ರೈಲುಗಳನ್ನು‌, ಪ್ರಧಾನಿ ಮೋದಿ ಉದ್ಘಾಟಿಸಿದರು.

ವಾರಾಣಸಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಾಲ್ಕೂ ಹೊಸ ವಂದೇ ಭಾರತ್‌ ರೈಲುಗಳಿಗೆ ಏಕಕಾಲಕ್ಕೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ, ಆ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.  ಹೊಸ ವಂದೇ ಭಾರತ್‌ ರೈಲುಗಳು, ಭಾರತೀಯ ರೈಲ್ವೆಯ ಸಂಪರ್ಕ ಜಾಲವನ್ನು ಮತ್ತಷ್ಟು ಸದೃಢಗೊಳಿಸಲಿದೆ” ಎಂದು ಪ್ರಧಾನಿ ಮೋದಿ ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು. ವಂದೇ ಭಾರತ್‌ ರೈಲುಗಳು ಸಂಪರ್ಕವನ್ನು ಹೆಚ್ಚಿಸುತ್ತದೆಯಲ್ಲದೇ, ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯವನ್ನು ಒದಗಿಸುತ್ತವೆ. ವಂದೇ ಭಾರತ್, ನಮೋ ಭಾರತ್ ಮತ್ತು ಅಮೃತ್ ಭಾರತ್ ನಂತಹ ರೈಲು ಸೇವೆಗಳು, ಹೊಸ ಪೀಳಿಗೆಯ ಭಾರತೀಯ ರೈಲ್ವೆಗೆ ಅಡಿಪಾಯ ಹಾಕುತ್ತಿವೆ” ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದರು. ಅಭಿವೃದ್ಧಿ ಹೊಂದಿದ ದೇಶಗಳ ಆರ್ಥಿಕ ಬೆಳವಣಿಗೆಯಲ್ಲಿ ಮೂಲಸೌಕರ್ಯವು ಪ್ರಮುಖ ಅಂಶವಾಗಿದ್ದು, ಭಾರತವು ಅಭಿವೃದ್ಧಿಯ ಹಾದಿಯಲ್ಲಿ ವೇಗವಾಗಿ ಚಲಿಸುತ್ತಿದೆ” ಎಂದು ಇದೇ ವೇಳೆ ಪ್ರಧಾನಿ ಮೋದಿ ಹೇಳಿದರು.

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್:
ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಪ್ರಯಾಣದ ಸಮಯವನ್ನು ಎರಡು ಗಂಟೆಗಳಿಗೂ ಹೆಚ್ಚು ಕಡಿಮೆ ಮಾಡಲಿದ್ದು, ಎಂಟು ಗಂಟೆ 40 ನಿಮಿಷಗಳಲ್ಲಿ ಪ್ರಯಾಣವನ್ನು ಪೂರ್ಣಗೊಳಿಸಲಿದೆ. ಇದು ಪ್ರಮುಖ ಐಟಿ ಮತ್ತು ವಾಣಿಜ್ಯ ಕೇಂದ್ರಗಳನ್ನು ಸಂಪರ್ಕಿಸುತ್ತದೆ. ವೃತ್ತಿಪರರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರಿಗೆ ವೇಗವಾದ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಆಯ್ಕೆಯನ್ನು ಒದಗಿಸುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಈ ರೈಲು ವಾರಣಾಸಿ, ಪ್ರಯಾಗ್‌ರಾಜ್, ಚಿತ್ರಕೂಟ ಮತ್ತು ಖಜುರಾಹೊ ಸೇರಿದಂತೆ ಭಾರತದ ಅತ್ಯಂತ ಗೌರವಾನ್ವಿತ ಧಾರ್ಮಿಕ ಮತ್ತು ಸಾಂಸ್ಕೃತಿಕ ತಾಣಗಳನ್ನು ಸಂಪರ್ಕಿಸುತ್ತದೆ.

Kishor KV