ಶ್ರೀನಗರದಲ್ಲಿ NIA ಕಾರ್ಯಾಚರಣೆ – ದೆಹಲಿ ಸ್ಫೋ*ಟಕ್ಕೆ ಕಾರಣವಾದ ನಾಲ್ವರು ಅರೆಸ್ಟ್

 ಶ್ರೀನಗರದಲ್ಲಿ NIA ಕಾರ್ಯಾಚರಣೆ – ದೆಹಲಿ ಸ್ಫೋ*ಟಕ್ಕೆ ಕಾರಣವಾದ ನಾಲ್ವರು ಅರೆಸ್ಟ್

ಕೆಂಪುಕೋಟೆ  ಬಳಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪ್ರಮುಖ ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ   ಶ್ರೀನಗರದಲ್ಲಿ  ರಾಷ್ಟ್ರೀಯ ತನಿಖಾ ಸಂಸ್ಥೆ ಗುರುವಾರ ಬಂಧಿಸಿದೆ. ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ ಆರಕ್ಕೆ ಏರಿದೆ. ಗುರುವಾರ ಬಂಧಿಸಲಾಗಿರುವ ನಾಲ್ವರು ಹಲವಾರು ಅಮಾಯಕರ ಸಾವಿಗೆ ಕಾರಣವಾದ ದೆಹಲಿಯ ಭಯೋತ್ಪಾದಕ ದಾಳಿಯಲ್ಲಿ  ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ  ತಿಳಿಸಿದೆ.

ದೆಹಲಿಯ ಕೆಂಪು ಕೋಟೆಯ ಹೊರಗೆ ನವೆಂಬರ್ 10 ರಂದು ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ನೀಡಿದ ಪ್ರೊಡಕ್ಷನ್ ಆದೇಶಗಳನ್ನು ಅನುಸರಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಗುರುವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದೆ.

ಇದನ್ನೂ ಓದಿ: ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗವೇ ಕಾರಣ – ಮರಣೋತ್ತರ ಪರೀಕ್ಷೆಯಲ್ಲಿ ಕಾರಣ ಬಹಿರಂಗ..!

ಬಂಧಿತರನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಡಾ. ಮುಜಮ್ಮಿಲ್ ಶಕೀಲ್ ಗನೈ, ಅನಂತನಾಗ್ ನ ಡಾ. ಅದೀಲ್ ಅಹ್ಮದ್ ರಾಥರ್, ಶೋಪಿಯಾನ್ ದ ಮುಫ್ತಿ ಇರ್ಫಾನ್ ಅಹ್ಮದ್ ವಾಗೆ ಮತ್ತು ಉತ್ತರ ಪ್ರದೇಶದ ಲಕ್ನೋ ದ ಡಾ. ಶಾಹೀನ್ ಸಯೀದ್ ಎಂದು ಗುರುತಿಸಲಾಗಿದೆ. ಈ ನಾಲ್ವರು ದೆಹಲಿ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇತರ ಇಬ್ಬರು ಶಂಕಿತರನ್ನು ಬಂಧಿಸಿದ ಬಳಿಕ ಇವರನ್ನು ಬಂಧಿಸಲಾಗಿದೆ.

ಸ್ಫೋಟಕ್ಕೆ ಬಳಸಲಾದ ಕಾರನ್ನು ನೋಂದಾಯಿಸಿಕೊಂಡಿದ್ದ ಅಮೀರ್ ರಶೀದ್ ಅಲಿ ಹಾಗೂ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನಿಗೆ ತಾಂತ್ರಿಕ ನೆರವು ನೀಡಿದ ಡ್ಯಾನಿಶ್ ಎಂದು ಕರೆಯಲ್ಪಡುವ ಜಾಸಿರ್ ಬಿಲಾಲ್ ವಾನಿ ಎಂಬವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಶಕ್ಕೆ ಪಡೆದಿದೆ. ಇವರ ಕಸ್ಟಡಿಯನ್ನು ಪಡೆದಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶದಲ್ಲಿರುವವರ ಸಂಖ್ಯೆ ಆರಕ್ಕೆ ಏರಿದೆ.

ಕೆಂಪುಕೋಟೆಯ ಬಳಿ ನವೆಂಬರ್ 10 ರಂದು ನಡೆದ ಕಾರು ಸ್ಪೋಟಕ್ಕೆ ಬಳಸಲಾದ ಐ20 ಕಾರನ್ನು ಚಾಲನೆ ಮಾಡುತ್ತಿದ್ದ ಡಾ. ಉಮರ್-ಉನ್-ನಬಿ ಅಲಿಯ ಹೆಸರಿನಲ್ಲಿ ವಾಹನವನ್ನು ಖರೀದಿ ಮಾಡಲಾಗಿತ್ತು. ಉಮರ್ ಗೂ ಮೊದಲು ವಾನಿಯನ್ನು ಉಮರ್ ಆತ್ಮಹತ್ಯಾ ಬಾಂಬರ್ ಆಗಲು ಮನವೊಲಿಸಲು ಪ್ರಯತ್ನಿಸಿದ್ದಾನೆ. ಆದರೆ ವಾನಿ ಇದಕ್ಕೆ ನಿರಾಕರಿಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಭೂಗತ ಬೆಂಬಲಿಗನಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

Kishor KV