ನಾಲ್ವರು ಯುವ ಕಾರ್ಮಿಕರು ಅನುಮಾನಾಸ್ಪದವಾಗಿ ಸಾವು – ಹೊಸಕೋಟೆ ಲೇಬರ್ ಶೆಡ್ನಲ್ಲಿ ಆಗಿದ್ದೇನು?

ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅಸ್ಸಾಂ ಮೂಲದ ನಾಲ್ವರು ಯುವ ಕಾರ್ಮಿಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕೋಕಾಕೋಲಾ ವೇರ್ಹೌಸ್ನಲ್ಲಿ ಕೆಲಸ ಮಾಡುತ್ತಿದ್ದ ಇವರು, ಲೇಬರ್ ಶೆಡ್ನಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾರೆ. ರಾತ್ರಿ ಕಿಟಕಿ-ಬಾಗಿಲು ಮುಚ್ಚಿ ಅಡುಗೆ ಮಾಡಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸೂಲಿಬೆಲೆ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.
ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲ್ ಚಲ್ ಎಬ್ಬಿಸಿದೆ. ಕೋಕಾಕೋಲಾ ವೇರ್ಹೌಸ್ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಲೇಬರ್ ಶೆಡ್ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ನಲ್ಲಿ ಹೊಸ ಅಪ್ಡೇಟ್! – ಇನ್ಮುಂದೆ ವೈಯಕ್ತಿಕ ಮಾಹಿತಿ ಲೀಕ್ ಆಗಲ್ಲ!
ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್ (20) ಎಂದು ಗುರುತಿಸಲಾಗಿದೆ. ನಾಲ್ವರೂ ರಾತ್ರಿ ಶೆಡ್ನ ಕಿಟಕಿ ಹಾಗೂ ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಅಡುಗೆ ಮಾಡಿದ್ದರು ಎನ್ನಲಾಗಿದೆ. ಬೆಳಗಿನ ಜಾವ ಅವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ದುರ್ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಕುರಿತು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನೋಡಿರಿ

