ವರನಿಗೆ ಚಾಕು ಇರಿತ ಕೇಸ್‌ಗೆ ಟ್ವಿಸ್ಟ್‌!‌ – ಕೊಲ್ಲಲು ಸುಪಾರಿ ಕೊಟ್ಟಿದ್ದೇ ವಧು!

ವರನಿಗೆ ಚಾಕು ಇರಿತ ಕೇಸ್‌ಗೆ ಟ್ವಿಸ್ಟ್‌!‌ – ಕೊಲ್ಲಲು ಸುಪಾರಿ ಕೊಟ್ಟಿದ್ದೇ ವಧು!

ಮಂಟಪಕ್ಕೆ ತೆರಳುವವ ಮೇಲೆ ವರನ ಮೇಲೆ ನಡೆದ ಹಲ್ಲೆ ಪ್ರಕರಣ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ತಿದೆ. ಮದುವೆ ರದ್ದಾದ ಬೆನ್ನಲ್ಲೇ ಆಸ್ಪತ್ರೆಗೆ ತೆರಳಿ ವಧು ಮದುವೆಯಾವಂತೆ ವಧು ಕೇಳಿಕೊಂಡಿದ್ದಳು. ಇದೀಗ ಈ ಪ್ರಕರಣದ ಸೂತ್ರದಾರಿಯೇ ವಧು ಅನ್ನೋದು ರಿವೀಲ್‌ ಆಗಿದೆ.

ಇದನ್ನೂ ಓದಿ: ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್! – ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ

ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು. ರವೀಶ್‌ ಹೊಸ ಜೀವನಕ್ಕೆ ಕಾಲಿಡುವ ಸಂತೋಷದಲ್ಲಿದ್ದರು. ಹಿಂದಿನ ದಿನ ರಿಸೆಪ್ಶನ್‌ಗೆ ರವೀಶ್‌ ಸೇರಿದಂತೆ ಸಂಬಂಧಿಕರು ಕಲ್ಯಾಣ ಮಂಟಪದತ್ತ ಹೊರಟಿದ್ದರು.  ಕೊಳ್ಳೇಗಾಲದ ವೆಂಕಟೇಶ್ವರ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಮತ್ತೊಂದು ಕಾರಿನಲ್ಲಿ ಬಂದ ಗುಂಪು ರವೀಶ್‌ ಕಾರನ್ನು ಅಡ್ಡಗಟ್ಟಿ ಗಲಾಟೆ ತೆಗೆದು ಚಾಕು ಇರಿದು ಪರಾರಿಯಾಗಿತ್ತು. ಗಾಯಗೊಂಡಿದ್ದ ರವೀಶ್ ಪ್ರಾಣಾಪಾಯದಿಂದ ಪಾರಾಗಿದ್ದರು.  ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆಗೆ ಇಳಿದಿದ್ದಾರೆ. ನಯನಳ ಕರೆ ಡಿಟೇಲ್ಸ್‌ ತೆಗೆದಾಗ ಪೊಲೀಸರು ಶಾಕ್‌ ಆಗಿದ್ದಾರೆ. ಚಾಕು ಇರಿದ ಆರೋಪಿಗಳ ಜೊತೆ ಆಕೆ ಸಂಪರ್ಕದಲ್ಲಿದ್ದ ವಿಚಾರ ಗೊತ್ತಾಗಿದೆ.

ಮೊದಲ ಆರೋಪಿ ದರ್ಶನ್ ತಮಟೆ ಬಾರಿಸುವ ಹಾಗೂ ಪುಸ್ತಕ ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದು ಎರಡು ವರ್ಷಗಳಿಂದ ನಯನಳನ್ನು ಪ್ರೀತಿಸುತ್ತಿದ್ದ. ಇದರ ನಡುವೆಯೂ ನಯನಗೆ ಕುಣಗಳ್ಳಿ ಗ್ರಾಮದ ರವೀಶ್ ಜೊತೆ ವಿವಾಹ ನಿಶ್ಚಯವಾಗಿತ್ತು. ಇದಾದ ಬಳಿಕ ರವೀಶ್‌ನ ಮೊಬೈಲ್‌ ನಂಬರ್ ಅನ್ನು ಆರೋಪಿ ದರ್ಶನ್‌ಗೆ ನೀಡಿ ಬೆದರಿಕೆ ಹಾಕಿ ಮದುವೆ ನಿಲ್ಲಿಸುವಂತೆ ನಯನಾ ಒತ್ತಡ ಹೇರಿದ್ದಳು. ಇಷ್ಟ ಇಲ್ಲದೇ ಇದ್ದರೂ ಮನೆಯವರು ಮದುವೆ ಮಾಡಲು ಮುಂದಾಗಿದ್ದರು. ಮದುವೆ ನಿಲ್ಲಿಸಲು ಕೊನೆಯ ಪ್ರಯತ್ನ ಎನ್ನುವಂತೆ ನಯನ ತನ್ನ ತಂಗಿಯ ಮೊಬೈಲ್‌ನಿಂದ ಪ್ರಿಯಕರ ದರ್ಶನ್‌ಗೆ ಕರೆ ಮಾಡಿ ವರನನ್ನು ಹತ್ಯೆ ಮಾಡುವಂತೆ ಹೇಳಿದ್ದಳು. ಪೊಲೀಸ್‌ ವಿಚಾರಣೆಯನ್ನು ಆರೋಪಿ ಎಲ್ಲಾ ವಿಚಾರವನ್ನು ಬಾಯಿ ಬಿಟ್ಟಿದ್ದಾನೆ.

ಈಗ ನಯನ, ನಯನಳ ಪ್ರೇಮಿ ದರ್ಶನ್ ಹಾಗು ಮಿಥುನ್‌ನನ್ನ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ವರನಿಗೆ ಚಾಕು ಇರಿದ ಬಳಿಕ ಮದುವೆ ರದ್ದಾಗಿತ್ತು. ಬಳಿಕ ಆಸ್ಪತ್ರೆಗೆ ಓಡೋಡಿ ಬಂದಿದ್ದ ನಯನ ತನಗೆ ಏನು ಗೊತ್ತಿಲ್ಲ ಎನ್ನುವಂತೆ ಕಣ್ಣೀರಿಟ್ಟಿದ್ದಳು. ವರ ರವೀಶ್ ಬಳಿ ಮದುವೆ ಮಾಡಿಕೊಳ್ಳಿ ಎಂದು ಬೇಡಿಕೊಂಡಿದ್ದಳು. ನೀವೂ ಕೈ ಕೊಟ್ಟರೆ ನನ್ನನ್ನು ಯಾರೂ ಮದುವೆಯಾಗುವುದಿಲ್ಲ ಎಂದು ನಾಟಕ ಆಡಿದ್ದಳು.

Shwetha M