ಅಯ್ಯಯ್ಯೋ.. ಮೈ ಸುಡೋ ಬಿಸಿಲು – ಏಪ್ರಿಲ್, ಮೇ ನಲ್ಲೂ ರಾಜ್ಯದಲ್ಲಿ ತಾಪಾಮಾನ ಏರಿಕೆ

ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ತಾಪಮಾನ ಏರಿಕೆಯು ನಿರೀಕ್ಷೆ ಮೀರುತ್ತಿದೆ. ಬೇಸಿಗೆಯ ಆರಂಭದಲ್ಲಿ ತಾಪಮಾನ ಏರಿಕೆ ಜನರ ನಿದ್ದೆ ಕೆಡಿಸಲಿದೆ. ಮುಂಬರುವ ದಿನಗಳಲ್ಲಿ ತಾಪಮಾನ ಏರಿಕೆ ದೊಡ್ಡ ಸವಾಲಾಗುತ್ತಿದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ವಾಡಿಕೆಗಿಂತಲೂ ಹೆಚ್ಚಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಾರ್ಚ್ ಮತ್ತು ಮೇಯಲ್ಲಿ ತಾಪಮಾನ ಏರಿಕೆಯಾಗಲಿದೆ ಎಂದು ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಹೆಚ್ಚಿನ ಒಳನಾಡಿನ ಜಿಲ್ಲೆಗಳಿಗೆ ಇದು ಕಠಿಣ ಬೇಸಿಗೆಯಾಗಲಿದೆ ಮತ್ತು ಹಲವು ಬಾರಿ ಬಿಸಿಗಾಳಿಯ ಹೊಡೆತಕ್ಕೆ ಎದುರಾಗಬೇಕಾಗುತ್ತದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವಾರು ಉತ್ತರ ಒಳನಾಡಿನ ಜಿಲ್ಲೆಗಳು ಈ ಅವಧಿಯಲ್ಲಿ ತೀವ್ರ ಶಾಖದ ಅಲೆಯಂತಹ ಸ್ಥಿತಿಯನ್ನು ಎದುರಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ: ಶನಿವಾರ ಸೂರ್ಯಾಸ್ತದ ನಂತರ ಶನಿ ಪೂಜೆ ಮಾಡಿ.. ಶನಿ ರಕ್ಷಾಕವಚ ಮಂತ್ರ ಓದಿ.. ನಿಮ್ಮದಾಗುತ್ತೆ ಯಶಸ್ಸು
ಮಾರ್ಚ್ ಮತ್ತು ಏಪ್ರಿಲ್ನಲ್ಲಿ ತಾಪಮಾನ ತೀವ್ರವಾಗಿ ಏರಲಿದೆ. ಮಾರ್ಚ್ ಮತ್ತು ಮೇ 2026 ರ ನಡುವೆ ಕೂಡ ತಾಪಮಾನ ದಿಢೀರ್ ಏರಿಕೆಯಾಗಲಿದೆ. ಹವಾಮಾನ ಮುನ್ಸೂಚನಾ ಸಂಸ್ಥೆಯು ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಿಗೆ ರೆಡ್ ಅಲರ್ಟ್ ಕೂಡ ಘೋಷಿಸಿದೆ. ಮಾರ್ಚ್ನಲ್ಲಿ ಈ ತಾಪಮಾನವು ವಾಡಿಕೆಗಿಂತ ಹೆಚ್ಚಾಗುವುದು ನೋಡಬಹುದು. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.
ಮಾರ್ಚ್ ನಿಂದ ಮೇ 2026ರ ವರೆಗೆ ಇಡೀ ಕರ್ನಾಟಕಕ್ಕೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ನಿರೀಕ್ಷಿಸಲಾಗಿದೆ. ಕರಾವಳಿ ಕರ್ನಾಟಕದದಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ನಿರೀಕ್ಷೆಗಳಿವೆ ಎಂದು ಸಹ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಈ ಬೇಸಿಗೆಯ ತಾಪಮಾನ ಗಮನದಲ್ಲಿಟ್ಟುಕೊಂಡು ಮುಂಚಿತವಾಗಿಯೆ ಜನರಿಗೆ ಪೂರ್ವ ತಯಾರಿಗೆ ಸೂಚಿಸಲಾಗಿದೆ.

ನೋಡಿರಿ

