ಜಾತ್ರೆಯಲ್ಲಿ ರಥೋತ್ಸವದ ವೇಳೆ ರಥ ಹರಿದು ಮಹಿಳೆಯ ಕಾಲು ಕಟ್! – ಅಷ್ಟಕ್ಕೂ ಆಗಿದ್ದೇನು?

ಕಲಬುರಗಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ದುರ್ಘಟನೆ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಕಟ್ಟುತ್ತೇನೆ, 2028ಕ್ಕೆ ನಾನೇ ಸಿಎಂ ಆಗುತ್ತೇನೆ : ಯತ್ನಾಳ್
ಅರಳಗುಂಡಗಿ ಗ್ರಾಮವು ಶರಣಬಸವೇಶ್ವರರ ಜನ್ಮಸ್ಥಳವಾಗಿರುವ ಹಿನ್ನೆಲೆಯಲ್ಲಿ ಪ್ರತಿವರ್ಷವೂ ಇಲ್ಲಿ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ನಿನ್ನೆ (ಮಾರ್ಚ್ 08) ಸಂಜೆ ಸುಮಾರು 6 ಗಂಟೆಗೆ ಜಾತ್ರೆಯ ಅಂಗವಾಗಿ ಶರಣಬಸವೇಶ್ವರ ರಥೋತ್ಸವ ಆರಂಭವಾಗಿತ್ತು. ಈ ವೇಳೆ ಗ್ರಾಮಸ್ಥರು ಉತ್ಸಾಹದಿಂದ ರಥವನ್ನು ಎಳೆಯಲು ಮುಂದಾಗಿದ್ದರು. ಜನಸಮೂಹ ಹೆಚ್ಚಾಗಿದ್ದ ಕಾರಣ ನಿಯಂತ್ರಣ ತಪ್ಪಿದ ರಥ ಜನರು ನಿಂತಿದ್ದ ದಿಕ್ಕಿಗೆ ಚಲಿಸಿದೆ. ಈ ಸಂದರ್ಭದಲ್ಲಿ ರಥದ ಸಮೀಪದಲ್ಲಿದ್ದ ನಾಗಮ್ಮ ಎಂಬ ಮಹಿಳೆ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ರಥದ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಇದ್ರಿಂದಾಗಿ ಅರಳಗುಂಡಗಿ ಗ್ರಾಮದ ನಿವಾಸಿಯಾದ ನಾಗಮ್ಮ ಎಂಬ ಮಹಿಳೆ ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಅವರ ಎರಡೂ ಕಾಲುಗಳು ಕಟ್ ಆಗಿದೆ.
ಸ್ಥಳದಲ್ಲಿದ್ದ ಜನರು ತಕ್ಷಣವೇ ಅವರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ನಾಗಮ್ಮಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ನಾಗಮ್ಮ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ನೋಡಿರಿ

