‘ರಿಷಬ್ ಪಂತ್ ಬೇಗ ಗುಣಮುಖರಾಗಲಿ’ – ಮಹಾಕಾಳೇಶ್ವರನ ಮೊರೆ ಹೋದ ಟೀಮ್ ಇಂಡಿಯಾ ಆಟಗಾರರು

‘ರಿಷಬ್ ಪಂತ್ ಬೇಗ ಗುಣಮುಖರಾಗಲಿ’ – ಮಹಾಕಾಳೇಶ್ವರನ ಮೊರೆ ಹೋದ ಟೀಮ್ ಇಂಡಿಯಾ ಆಟಗಾರರು

ಟೀಮ್ ಇಂಡಿಯಾ ಆಟಗಾರ ರಿಷಬ್ ಪಂತ್ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ​ ಮುಂಬೈನ ಆಸ್ಪತ್ರೆಯಲ್ಲಿ ರಿಷಬ್ ಪಂತ್ ಚಿಕಿತ್ಸೆ ಪಡೆಯುತ್ತಿದ್ದು ಆದಷ್ಟು ಬೇಗ ಗುಣಮುಖರಾಗಬೇಕು. ಟೀಮ್ ಗೆ ಸೇರಿಕೊಳ್ಳಬೇಕು ಎಂದು ಟೀಮ್ ಇಂಡಿಯಾ ಆಟಗಾರರು ದೇವರ ಮೊರೆ ಹೋಗಿದ್ದಾರೆ. ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್ ಸೇರಿದಂತೆ ಕೆಲ ಆಟಗಾರರು ಮಹಾಕಾಳೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:  ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ – ದ್ವಿಶತಕ ಸಿಡಿಸಿ ಶುಭ್ ಮನ್ ಗಿಲ್ ದಾಖಲೆ!

ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಿಷಬ್ ಪಂತ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸೂರ್ಯಕುಮಾರ್ ಯಾದವ್, ‘ರಿಷಬ್ ಪಂತ್ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಅವರು ತಂಡಕ್ಕೆ ಕಮ್ ಬ್ಯಾಕ್ ಮಾಡುವುದು ಮುಖ್ಯವಾಗಿದೆ. ನಾವು ರಿಷಬ್ ಪಂತ್ ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದೇವೆ’ ಎಂದರು

ಡಿಸೆಂಬರ್‌ 30 ರಂದು ದೆಹಲಿಯಿಂದ ಉತ್ತರಾಖಂಡಕ್ಕೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ರಿಷಭ್‌ ಪಂತ್‌ ಭೀಕರ ಅಪಘಾತಕ್ಕೀಡಾಗಿದ್ದರು. ಡೆಹರಾಡೂನ್‌ನ ಮ್ಯಾಕ್ಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರಿಷಭ್‌ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಏರ್‌ಲಿಫ್ಟ್‌ ಮಾಡಲಾಗಿತ್ತು. 10 ದಿನಗಳ ಹಿಂದೆ ರಿಷಭ್‌ ಪಂತ್‌ ಅವರ ಮೊಣಕಾಲು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿತ್ತು. ಮುಂದಿನ ಎರಡು ವಾರಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.

suddiyaana