ಪ್ಲಾಟ್‌ಫಾರ್ಮ್‌ ಮೇಲೆ ಬೇಕಾಬಿಟ್ಟಿ ನುಗ್ಗಿದ NWKSRTC – ಮಗು ಸಾ*ವು, ನಾಲ್ಕು ಜನಕ್ಕೆ ಗಂಭೀರ ಗಾಯ!

ಪ್ಲಾಟ್‌ಫಾರ್ಮ್‌ ಮೇಲೆ ಬೇಕಾಬಿಟ್ಟಿ ನುಗ್ಗಿದ NWKSRTC – ಮಗು ಸಾ*ವು, ನಾಲ್ಕು ಜನಕ್ಕೆ ಗಂಭೀರ ಗಾಯ!

ನಗರದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಮುಂಜಾನೆ ಘೋರ ಅಪಘಾತ ಸಂಭವಿಸಿದೆ. ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪ್ಲಾಟ್‌ಫಾರ್ಮ್‌ ಮೇಲೆ ನಿಂತಿದ್ದವರ ಮೇಲೆ ಬಸ್‌ ನುಗ್ಗಿದ ಪರಿಣಾಮ ಎರಡು ವರ್ಷದ ಪುಟ್ಟ ಮಗು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

 ಇಂದು (ಬುಧವಾರ) ಮುಂಜಾನೆ ಸುಮಾರು 06.30 ಗಂಟೆಯಲ್ಲಿ ಘಟನೆ ಸಂಭವಿಸಿದೆ. ವಾಯವ್ಯ ಕರ್ನಾಟಕ ಸಾರಿಗೆ ಬಸ್‌ ಚಾಲಕ ಮಂಜುನಾಥ ಎಂಬಾತನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ದುರಂತ ಸಂಭವಿಸಿದೆ. ಪ್ಲಾಟ್ ಫಾರ್ಮ್‌ ನಂ.2 ಕಡೆಗೆ ಏಕಾಏಕಿ ಸಾರಿಗೆ ಬಸ್‌ ನುಗ್ಗಿದ್ದರಿಂದ ಸವಣೂರಿನ ಹಜರತ್‌ ಅಲಿ (2) ಮಗು ಮೃತಪಟ್ಟಿದೆ. ಘಟನೆಯಲ್ಲಿ ಬಂಕಾಪುರದ ವಾಸುದೇವ (44), ಹರ್ಷ (6), ಕಾವ್ಯಾಂಜಲಿ (39), ಅರಬಜ್‌ಖಾನ್‌ (13) ಗಾಯಗೊಂಡಿದ್ದಾರೆ.

ಬಸ್‌ ಹರಿದಿದ್ದರಿಂದ ಹಜರತ್ ಅಲಿ ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣವೇ ಹಾವೇರಿ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಹಜರತ್ ಅಲಿ ಮೃತಪಟ್ಟಿದ್ದಾನೆ. ಈ ಅಪಘಾತದ ಬಗ್ಗೆ ನಯಿಮ್ ಎಂಬುವವರು ನೀಡಿದ ದೂರಿನ ಮೇರೆಗೆ ಹಾವೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನರ ಮೇಲೆ ಬಸ್ ನುಗ್ಗಿದ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Kishor KV