ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕಗಳ ನೀಡಲು ಸೂಚನೆ – ಆದೇಶವನ್ನು ಮರು ಪರಿಶೀಲಿಸುವಂತೆ ಹೈಕೋರ್ಟ್ ಸರ್ಕಾರದ ಮನವಿ

ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕಗಳ ನೀಡಲು ಸೂಚನೆ – ಆದೇಶವನ್ನು ಮರು ಪರಿಶೀಲಿಸುವಂತೆ ಹೈಕೋರ್ಟ್ ಸರ್ಕಾರದ ಮನವಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕಗಳ ನೀಡಲು ಸೂಚಿಸಿ ಹೊರಡಿಸಿರುವ ಆದೇಶವನ್ನು ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಕುರಿತು ರಾಜ್ಯ ಸರ್ಕಾರವು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಮಾಡಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಮತ್ತು ಎನ್ ಎಸ್ ಕ್ಯೂ ಎಫ್ ವಿಷಯಗಳಿಗೆ ಅಂಕದ ಬದಲು ಗ್ರೇಡ್ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರಕಟಿಸಿದ್ದರು. ಆ ಕ್ರಮ‌ ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್, ಉಡುಪಿಯ ಅನುಷಾ ಮತ್ತು ಸುದೀಕ್ಷಾ ಅವರು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿಯನ್ನು ಏ.15ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಪೀಠ, 2025-26ರ ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ನಿಯಮದಂತೆ ಮೌಲ್ಯಮಾಪನ ನಡೆಸಬೇಕು. ಹಿಂದಿ ಸೇರಿ ತೃತೀಯ ಭಾಷೆಗಳ ವಿಷಯಗಳಿಗೆ ಗ್ರೇಡ್ ಬದಲಾಗಿ ಅಂಕ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.‌ ಈ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕೋರಿ ಹೈ ಕೋರ್ಟ್ ಗೆ ಸರ್ಕಾರವು ನಿನ್ನೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.

ಇದನ್ನೂ ಓದಿ: ಕಾಡಾನೆ ಸೆರೆ ಕಾರ್ಯಾಚರಣೆ ಕಡೆಗೂ ಸಕ್ಸಸ್! – ಹಾಸನ ಜನರ ನಿದ್ದೆಗೆಡಿಸಿದ್ದ ನರಹಂತಕ ಸೆರೆ!

2025-26 ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರಪತ್ರಿಕೆಗಳ ಮೌಲ್ಯಮಾಪನವನ್ನು ಪರೀಕ್ಷಾ ಅಧಿಸೂಚನೆ ಹೊರಡಿಸಿದ ದಿನಾಂಕದ ವೇಳೆ ಪ್ರಚಲಿತದಲ್ಲಿದ್ದ ನಿಯಮಗಳ ಪ್ರಕಾರವೇ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಮೂರನೇ ಭಾಷೆಯ ಉತ್ತರಪತ್ರಿಕೆಗಳನ್ನು ಗ್ರೇಡಿಂಗ್ ಪದ್ಧತಿ ತರದೇ, ಅದೇ ನಿಯಮಗಳಂತೆ ಮೌಲ್ಯಮಾಪನ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ಏಪ್ರಿಲ್ 15ರಂದು ಈ ಆದೇಶ ಹೊರಡಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಮೂರನೇ ಭಾಷೆಯ ಮೌಲ್ಯಮಾಪನದಲ್ಲಿ ಗ್ರೇಡಿಂಗ್ ವ್ಯವಸ್ಥೆ ಪರಿಚಯಿಸುವ ಬಗ್ಗೆ ನೀಡಿದ ಇತ್ತೀಚಿನ ಹೇಳಿಕೆಯಿಂದ ಆತಂಕ ವ್ಯಕ್ತಪಡಿಸಿ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗೆ ಸರ್ಕಾರದ ವಕೀಲರು ನೀಡಿದ ಉತ್ತರವನ್ನು ದಾಖಲಿಸಿಕೊಂಡು ಈ ಆದೇಶ ನೀಡಲಾಗಿದೆ.

Kishor KV