ಪಾದಯಾತ್ರೆ ವೇಳೆ ಕುಸಿದು ಬಿದ್ದ ಖ್ಯಾತ ನಟ – ಚಿಂತಾಜನಕ ಸ್ಥಿತಿ.. ವೈದ್ಯರು ಹೇಳಿದ್ದೇನು..?

ಪಾದಯಾತ್ರೆ ವೇಳೆ ಕುಸಿದು ಬಿದ್ದ ಖ್ಯಾತ ನಟ – ಚಿಂತಾಜನಕ ಸ್ಥಿತಿ.. ವೈದ್ಯರು ಹೇಳಿದ್ದೇನು..?

ಪಾದಯಾತ್ರೆ ವೇಳೆ ಕುಸಿದು ಬಿದ್ದು ಟಾಲಿವುಡ್ ನಟ ನಂದಮೂರಿ ತಾರಕ ರತ್ನ ತೀವ್ರ ಅಸ್ವಸ್ಥರಾಗಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿಯಾಗಿರುವ ನಂದಮೂರಿ ತಾರಕ ರತ್ನರನ್ನ ಆಂಧ್ರಪ್ರದೇಶದ ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ‘ಇಂಡಿಯಾ – ದಿ ಮೋಸ್ಟ್ ಕ್ವೆಶ್ಚೆನ್’ Vs ‘ದಿ ಕಾಶ್ಮೀರ್ ಫೈಲ್ಸ್’ – ಕಾಲೇಜು ಕ್ಯಾಂಪಸ್​ನಲ್ಲಿ ಏನಿದು ಕದನ..!?

ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ನರಾ ಲೋಕೇಶ್ ಅವರು ಕುಪ್ಪಂನಲ್ಲಿ ಪಾದಯಾತ್ರೆ ಆರಂಭಿಸಿದ್ರು. ಪಾದಯಾತ್ರೆಯಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ತಾರಕ ರತ್ನ ಅಸ್ವಸ್ಥರಾಗಿ ಬಿದ್ದಿದ್ದು ಪ್ರಜ್ಞೆ ಕಳೆದುಕೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ವೈದ್ಯರು ಕೂಡ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡುವಂತೆ ಸಲಹೆ ನೀಡಿದ್ದಾರೆ. ನಂದಮೂರಿ ತಾರಕ ರತ್ನನಿಗೆ ಹೃದಯಾಘಾತವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಸದ್ಯ ನಂದಮೂರಿ ತಾರಕ ರತ್ನರನ್ನ ಆಸ್ಪತ್ರೆಗೆ ಕರೆದೊಯ್ಯುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈದ್ಯರು ತಾರಕರತ್ನ ಅವರಿಗೆ ಆಂಜಿಯೋಗ್ರಾಮ್ ಮಾಡಿ ಸ್ಟೆಂಟ್ ಅಳವಡಿಸಿದ್ದಾರೆ ಎಂದು ಹೇಳಲಾಗ್ತಿದೆ. ವಿಷಯ ತಿಳಿಯುತ್ತಿದ್ದಂತೆ ನಟ ಬಾಲಕೃಷ್ಣ ಆಸ್ಪತ್ರೆಗೆ ತೆರಳಿ ತಾರಕ ರತ್ನ ಆರೋಗ್ಯದ ಬಗ್ಗೆ ವೈದ್ಯರ ಬಳಿ ವಿಚಾರಿಸಿದ್ದಾರೆ.

 

suddiyaana