ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌! – ಈ ದಿನ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌! – ಈ ದಿನ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ!

ನಮ್ಮ ಮೆಟ್ರೋ ಬೆಂಗಳೂರಿನ ಜೀವನಾಡಿಯೇ ಆಗಿದೆ. ಟ್ರಾಫಿಕ್ ಜಂಜಾಟದಿಂದ ತಪ್ಪಿಸಿಕೊಳ್ಳಲು ಜನರು ಮೆಟ್ರೋ ಮೂಲಕ ಪ್ರಯಾಣ ಮಾಡೋದೆ ಬೆಸ್ಟ್ ಅಂತಾರೆ. ಮೆಟ್ರೋ ವ್ಯವಸ್ಥೆಯಲ್ಲಿ ಒಂದೇ ಒಂದು ದಿನ ವ್ಯತ್ಯಯವಾದ್ರು ಪ್ರಯಾಣಿಕರಿಗೆ ಸಮಸ್ಯೆ ಆಗಲಿದೆ. ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್‌ ಸುದ್ದಿಯಿದೆ. ಈ ದಿನದಂದು ನಮ್ಮ ಮೆಟ್ರೋ  ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯವಾಗಲಿದೆ.

ಇದನ್ನೂ ಓದಿ: ಕೇದಾರನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಲಕ್ಷ ಲಕ್ಷ ಭಕ್ತರು – ಆರಂಭದಲ್ಲೇ ಭಕ್ತರ ಸಂಖ್ಯೆ ಹೆಚ್ಚಾಗಿದ್ದಕ್ಕೆ ಆರೋಗ್ಯ ಇಲಾಖೆ ಅಲರ್ಟ್

ಮೇ 17 ರಂದು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯವಾಗಲಿದೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ​ 17ರಂದು ಅಂದರೆ ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ (ಸೆಂಟ್ರಲ್ ಕಾಲೇಜ್) ನಡುವೆ ಅತ್ಯಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ 07 ಗಂಟೆಯಿಂದ 09 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ.

ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 07 ಗಂಟೆಯಿಂದ 09 ಗಂಟೆ ಅವಧಿಯಲ್ಲಿ ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಚಲ್ಲಘಟ್ಟ – ವಿಜಯನಗರ

ಎಂ.ಜಿ. ರಸ್ತೆ – ವೈಟ್ ಫೀಲ್ಡ್, ಕಾಡುಗೋಡಿ

ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್

ಆರ್.ವಿ. ರಸ್ತೆ – ಬೊಮ್ಮಸಂದ್ರ

ಭಾನುವಾರ ಬೆಳಗ್ಗೆ 09 ಗಂಟೆಯ ನಂತರ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

Shwetha M

Leave a Reply

Your email address will not be published. Required fields are marked *