ಟೀಂ ಇಂಡಿಯಾಕ್ಕೆ ಕನ್ನಡಿಗನ ಆಸರೆ – ಸೆಂಚುರಿ ಸಿಡಿಸಿ ಖದರ್ ತೋರಿಸಿದ ಪಡಿಕ್ಕಲ್

ಟೀಮ್ ಇಂಡಿಯಾದ ಯುವ ದೇವದತ್ ಪಡಿಕ್ಕಲ್ ಶತಕ ಸಿಡಿಸಿ ಮಿಂಚಿದ್ದಾರೆ. ಲಂಕಾ ವಿರುದ್ಧ ಕೊಲಂಬೋದ ಎನ್ಸಿಸಿ ಮೈದಾನದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಆರಂಭದಲ್ಲೇ ಹಿನ್ನಡೆ ಎದುರಾಯಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಖಾತೆ ತೆರೆಯುವ ಮುನ್ನವೇ ಶೂನ್ಯಕ್ಕೆ ಔಟಾಗಿ ಪೆವಿಲಿಯನ್ಗೆ ಮರಳಿದರು. ಈ ಸಂಕಷ್ಟದ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕ್ರೀಸ್ಗೆ ಬಂದ ದೇವದತ್ ಪಡಿಕ್ಕಲ್, ಅನುಭವಿ ಕನ್ನಡಿಗ ಕೆ.ಎಲ್. ರಾಹುಲ್ ಅವರೊಂದಿಗೆ ಜಂಟಿಯಾಗಿ ತಂಡದ ಇನಿಂಗ್ಸ್ಗೆ ಬಲ ತಂದರು. ಎದುರಾಳಿ ಬೌಲರ್ಗಳನ್ನು ಅತ್ಯಂತ ಆತ್ಮವಿಶ್ವಾಸದಿಂದ ಎದುರಿಸಿದ ಪಡಿಕ್ಕಲ್, ಕೇವಲ 61 ಎಸೆತಗಳಲ್ಲಿ 6 ಆಕರ್ಷಕ ಬೌಂಡರಿಗಳ ನೆರವಿನಿಂದ ಭರ್ಜರಿ ಅರ್ಧಶತಕ ಪೂರೈಸಿ ಮಿಂಚಿದರು.
ಈ ಹಿಂದೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಿದ್ದ ಸಾಯಿ ಸುದರ್ಶನ್ ಅವರು ಬೆರಳಿನ ಗಾಯದ ಕಾರಣದಿಂದಾಗಿ ಈ ಅಭ್ಯಾಸ ಪಂದ್ಯದಿಂದ ಹೊರಗುಳಿದಿದ್ದಾರೆ. ಸಿಕ್ಕ ಅವಕಾಶವನ್ನು ಅತ್ಯದ್ಭುತವಾಗಿ ಬಳಸಿಕೊಂಡಿರುವ ಪಡಿಕ್ಕಲ್, ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಆಗಸ್ಟ್ 15 ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ಲೇಯಿಂಗ್ ಇಲೆವೆನ್ನಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿಯುವ ಸಾಧ್ಯತೆಗಳು ದಟ್ಟವಾಗಿವೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ತನ್ನ ಮೊದಲ ಇನಿಂಗ್ಸ್ನಲ್ಲಿ 8 ವಿಕೆಟ್ ನಷ್ಟಕ್ಕೆ 363 ರನ್ ಗಳಿಸಿ ಇನಿಂಗ್ಸ್ ಡಿಕೇರ್ ಮಾಡಿಕೊಂಡಿತು. ಇದಕ್ಕೆ ಉತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿರುವ ಭಾರತ ತಂಡವು 50 ಓವರ್ಗಳ ಮುಕ್ತಾಯದ ವೇಳೆಗೆ 4ವಿಕೆಟ್ಗಳನ್ನು ಕಳೆದುಕೊಂಡು 180 ರನ್ಗಳನ್ನು ಕಲೆಹಾಕಿದ್ದು, ಪಡಿಕ್ಕಲ್ ಅವರ ಭರವಸೆಯ ಆಟದಿಂದಾಗಿ ತಂಡವು ಉತ್ತಮ ಸ್ಥಿತಿಯತ ಮುನಡೆಯುತಿದೆ.

ನೋಡಿರಿ

