ಟೀಚರ್ ಬೈದಿದ್ದಕ್ಕೆ ಮನನೊಂದು 9 ವರ್ಷದ ಬಾಲಕಿ ಸೂಸೈಡ್ ?

ಮಂಡ್ಯ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಗ್ರಾಮದಲ್ಲಿ 9 ವರ್ಷದ ಬಾಲಕಿ ನೇಣಿಗೆ ಶರಣಾಗಿದ್ದಾಳೆ. ಕು. ವಿದ್ಯಾಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ದುಃಖ ಮತ್ತು ಆಘಾತವನ್ನುಂಟುಮಾಡಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ, ಇಷ್ಟು ಸಣ್ಣ ವಯಸ್ಸಿಗೆ ತನ್ನ ಜೀವನವನ್ನೇ ಅಂತ್ಯವಾಗಿಸಿಕೊಂಡಿದ್ದಾಳೆ.
ಇದನ್ನೂ ಓದಿ: ಅಭಿಮಾನಿಗಳಿಗಾಗಿ ಮತ್ತೆ ಬಂದ ಅಭಿಮನ್ಯು – ದಸರಾಗೆ ನಿಶಾನೆ ಆನೆಯಾಗಿ ಅಭಿಮನ್ಯು ಆಯ್ಕೆ
ಮೃತ ಬಾಲಕಿ ವಿದ್ಯಾಶ್ರೀ ಅವರ ತಾಯಿ ದೂರು ನೀಡಿರುವ ಪ್ರಕಾರ, ಶಾಲೆಯಲ್ಲಿ ಟೀಚರ್ ಹೊಡೆದು ನಿಂದಿಸಿದ್ದರಿಂದ ಮಗಳು ಮನನೊಂದು ಈ ದಾರಿ ಹಿಡಿದಿದ್ದಾರೆ ಎನ್ನಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಕ್ಕರೆನಾಡು ಎಂದೇ ಪ್ರಸಿದ್ಧವಾದ ಮಂಡ್ಯ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ಎಲ್ಲರನ್ನು ಬೆಚ್ಚಿಬೀಳಿಸಿದೆ.
ಗುಡಿಗೆರೆ ಗ್ರಾಮದ ಈ ಚಿಕ್ಕ ಹುಡುಗಿ ತನ್ನ ಕುಟುಂಬಕ್ಕೆ ಅತ್ಯಂತ ಪ್ರಿಯಳಾಗಿದ್ದಳು. ಶಾಲೆಗೆ ಹೋಗುತ್ತಿದ್ದ ವಿದ್ಯಾಶ್ರೀ ನಿತ್ಯವೂ ಓದಿನಲ್ಲಿ ಆಸಕ್ತಿ ತೋರುತ್ತಿದ್ದಳು ಎಂದು ಸ್ಥಳೀಯರು ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶಾಲೆಯಲ್ಲಿ ನಡೆದ ಘಟನೆಯಿಂದಾಗಿ ಮಾನಸಿಕವಾಗಿ ನೊಂದಿದ್ದಳು ಎಂಬುದು ತಾಯಿಯ ಆರೋಪ.
ಟೀಚರ್ ಮೇಲೆ ತಾಯಿ ಆರೋಪ
ತಾಯಿ ನೀಡಿರುವ ದೂರಿನಲ್ಲಿ, ಟೀಚರ್ ಮಗಳನ್ನು ಹೊಡೆದು ನಿಂದಿಸಿದ್ದಾರೆ ಎಂದು ತಿಳಿಸಲಾಗಿದೆ. ಇದರಿಂದ ಮಗಳು ಮನಸ್ಸಿಗೆ ತೀವ್ರ ನೋವುಂಟಾಗಿ ಆತ್ಮಹತ್ಯೆಯ ಕಡೆಗೆ ಸಾಗಿದ್ದಾಳೆ ಎಂದು ಹೇಳಲಾಗಿದೆ. ಪೊಲೀಸರು ಈ ದೂರನ್ನು ಪರಿಗಣಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಟೀಚರ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲಾಗುತ್ತಿದೆ. ಸಂಬಂಧಪಟ್ಟವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

ನೋಡಿರಿ

