ಶರತ್ ಶೆಟ್ಟಿ ಕೊಲೆ ಆರೋಪಿಗಳನ್ನು ಹಿಡಿಯಲು ದೈವದ ಮೊರೆ – ನೊಂದ ಕುಟುಂಬಕ್ಕೆ ಪಂಜುರ್ಲಿ ಅಭಯ!

ಶರತ್ ಶೆಟ್ಟಿ ಕೊಲೆ ಆರೋಪಿಗಳನ್ನು ಹಿಡಿಯಲು ದೈವದ ಮೊರೆ – ನೊಂದ ಕುಟುಂಬಕ್ಕೆ ಪಂಜುರ್ಲಿ ಅಭಯ!

ಶರತ್ ಶೆಟ್ಟಿ ಕೊಲೆ ಪ್ರಕರಣ ನಡೆದು ತಿಂಗಳುಗಳೇ ಕಳೆದಿದೆ. ಆದರೆ, ಇದುವರೆಗೂ ಕೊಲೆಗಾರರು ಸಿಕ್ಕಿಬಿದ್ದಿಲ್ಲ. ಇದರಿಂದ ನೊಂದ ಕುಟುಂಬ ದೈವದ ಮೊರೆ ಹೋಗಿದೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾಂಗಾಳ ಗ್ರಾಮದಲ್ಲಿ ನಡೆದ ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಶರತ್ ಶೆಟ್ಟಿ ಕುಟುಂಬಸ್ಥರು ದೈವದ ಬಳಿ ನ್ಯಾಯ ಕೇಳಿದ್ದಾರೆ. ಈ ವೇಳೆ ಶರತ್ ಶೆಟ್ಟಿ ಯಾವ ರೀತಿ ಸಾಯುವಂತಾಯಿತು ಅದೇ ರೀತಿ ಅವರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ ನೀಡಿದೆ.

ಇದನ್ನೂ ಓದಿ:  ತಿರುಪತಿ ತಿಮ್ಮಪ್ಪನಿಗೆ 4,411 ಕೋಟಿ ರೂಪಾಯಿ ಬಜೆಟ್! –  ಆದಾಯ ಮೂಲ ಯಾವುದು ಗೊತ್ತಾ?

ಪಾಂಗಾಳ ಶರತ್ ವಿ. ಶೆಟ್ಟಿ ಕೊಲೆಯಾಗಿ ತಿಂಗಳುಗಳೇ ಕಳೆದಿವೆ. ಪಾಂಗಾಳದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿರುತ್ತಿದ್ದ ಶರತ್ ಶೆಟ್ಟಿ ಕೊಲೆ ಪ್ರಕರಣ ಕಾಪುವಿನ ಜನತೆಗೆ ಆಘಾತ ನೀಡಿತ್ತು. ಪಾಂಗಾಳ ಪಡುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮದಲ್ಲಿ ಪಾಲ್ಗೊಂಡಿದ್ದಾಗ ಮಾತುಕತೆಗೆಂದು ಕರೆದ ದುಷ್ಕರ್ಮಿಗಳು, ಬಳಿಕ ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಇದುವರೆಗೂ ಕೊಲೆಗಾರರು ಸಿಕ್ಕಿಲ್ಲ. ಹೀಗಾಗಿ ಪಾಂಗಾಳ ಶರತ್ ವಿ ಶೆಟ್ಟಿ ಕುಟುಂಬಸ್ಥರು ದೈವದ ಮೊರೆ ಹೋಗಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಯಾಗಬೇಕು ಎಂದು ದೈವದ ಬಳಿ ಕೋರಿಕೊಂಡಿದ್ದಾರೆ. ಈ ವೇಳೆ ಪಂಜುರ್ಲಿ ದೈವ, ಶರತ್ ಶೆಟ್ಟಿ ಕೊಲೆ ಆರೋಪಿಗಳು ಪಾತಾಳದಲ್ಲಿ ಅಡಗಿ ಕುಳಿತರೂ ಹುಡುಕುತ್ತೇನೆ ಎಂದು ಅಭಯ ನುಡಿದಿದೆ.

suddiyaana