ಕ್ರೀಡಾಪಟುಗಳಿಗೆ ಬಜೆಟ್‌ನಲ್ಲಿ ಬಂಪರ್ ಗಿಫ್ಟ್- ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ

ಕ್ರೀಡಾಪಟುಗಳಿಗೆ ಬಜೆಟ್‌ನಲ್ಲಿ ಬಂಪರ್ ಗಿಫ್ಟ್- ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ

ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳಿಗೆ ಬಂಪರ್ ಆಫರ್ ನೀಡಿದ್ದಾರೆ. ಪ್ಯಾರಿಸ್ ಒಲಂಪಿಕ್ ನಲ್ಲಿ ಪದಕ ಗೆದ್ದವರಿಗೆ ಕೋಟಿ ಕೋಟಿ ರೂಪಾಯಿಯ ಬಹುಮಾನವನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್ – ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ

ಒಲಿಂಪಿಕ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಅಲ್ಲದೇ, ಕಾಮನ್ ವೆಲ್ತ್ ಗೇಮ್ ನಲ್ಲಿ ಪದಕ ಗೆದ್ದವರಿಗೂ ಪ್ರೋತ್ಸಾಹ ಧನ ಘೋಷಣೆ ಮಾಡಿದ್ದು, ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 25 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 15 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಾಡಿಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲೂ ಶೇಕಡಾ 2 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು. ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಮ ಸಮುಚ್ಛಯವ ಒಳಗೊಂಡ ಕ್ರೀಡಾ ನಗರ ಸಾರ್ವಜನಿಕರ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ. ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಒಟ್ಟಾರೆ 12 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ ಅಯೋಜಿಸಲಾಗುವುದು. ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದಿಂದ ಒದಗಿಸಲಾವುದು. ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂಪಾಯಿ ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

Sulekha