ಗಿಚ್ಚಿ ಗಿಲಿಗಿಲಿ ನಟನ ಮೇಲೆ ಹಿಟ್ ಆಂಡ್ ರನ್ ಕೇಸ್ ದಾಖಲು – ಅಪಘಾತದ ಬಗ್ಗೆ ಸ್ಪಷ್ಟನೆ ನೀಡಿದ ಚಂದ್ರಪ್ರಭ

ಗಿಚ್ಚಿ ಗಿಲಿಗಿಲಿ ನಟನ ಮೇಲೆ ಹಿಟ್ ಆಂಡ್ ರನ್ ಕೇಸ್ ದಾಖಲು – ಅಪಘಾತದ ಬಗ್ಗೆ ಸ್ಪಷ್ಟನೆ ನೀಡಿದ ಚಂದ್ರಪ್ರಭ

ಮಜಾ ಭಾರತ ಹಾಗೂ ಗಿಚ್ಚಿ ಗಿಲಿಗಿಲಿ ಸೀಸನ್ 1 ಮತ್ತು ಸೀಸನ್ 2 ಕಾಮಿಡಿ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿ ಸೀಸನ್ 2 ವಿನ್ನರ್ ಟ್ರೋಫಿ ಗೆದ್ದಿರುವ ಹಾಸ್ಯ ನಟ ಚಂದ್ರಪ್ರಭ ಮೇಲೆ ಹಿಟ್ ಆಂಡ್ ರನ್ ಕೇಸ್ ದಾಖಲಾಗಿದೆ. ಚಂದ್ರಪ್ರಭ ಅವರು ಚಿಕ್ಕಮಗಳೂರು ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಸವಾರನಿಗೆ ಗುದ್ದಿದ್ದಾರೆ. ಈ ವೇಳೆ ಮಾನವೀಯತೆಗೂ ಕಾರನ್ನು ನಿಲ್ಲಿಸದೇ ಪರಾರಿ ಆಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ, ತನ್ನ ಮೇಲಿನ ಆರೋಪಕ್ಕೆ ನಟ ಚಂದ್ರಪ್ರಭ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಪೋಲೀಸರ ಬಿಗಿ ಭದ್ರತೆಯಲ್ಲಿ ದಸರಾ ಗಜಪಡೆಯ ತೂಕ ಪರೀಕ್ಷೆ –ಕ್ಯಾಪ್ಟನ್ ಅಭಿಮನ್ಯು ತೂಕ ಎಷ್ಟು ಗೊತ್ತಾ?

ಚಿಕ್ಕಮಗಳೂರು ನಗರದಲ್ಲಿ ಹಿಟ್ ಅಂಡ್ ರನ್ ಆಕ್ಸಿಡೆಂಟ್ ಮಾಡಲಾಗಿದೆ. ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಬೈಕಿಗೆ ಗುದ್ದಿದ ಚಂದ್ರಪ್ರಭ ಕಾರು ಸಮೇತ ಎಸ್ಕೇಪ್ ಆಗಿದ್ದಾರೆ. KA 51 MD 9552 ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ಕಾರು ಇದಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರು ಗುದ್ದಿದ ಪರಿಣಾಮ ಬೈಕ್ ಸವಾರ ಮಾಲ್ತೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಾಲತೇಶ್ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ನಿವಾಸಿ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಮಾಲ್ತೇಶ್ ಅವರನ್ನು ಹಾಸನದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಂದ್ರಪ್ರಭ ವಿಚಾರಣೆಗೆ ಬರುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಪೊಲೀಸ್ ಠಾಣೆಗೆ ವಿಚಾರಣೆಗೆ ಬರುವುದಾಗಿಯೂ ಚಂದ್ರಪ್ರಭಾ ತಿಳಿಸಿದ್ದಾರೆ. ಆದರೆ, ಒಬ್ಬ ಖ್ಯಾತ ನಟನಾಗಿದ್ದರೂ ಆಕಸ್ಮಿಕವಾಗಿ ಸಂಭವಿಸಿದ ಅಪಘಾತದ ಘಟನೆಯ ನಂತರ ಬೈಕ್ ಸವಾರನನ್ನು ನೋಡುವ ಹಾಗೂ ಅವರನ್ನು ಆಸ್ಪತ್ರೆಗೆ ಸೇರಿಸುವ ಮಾನವೀಯತೆಯನ್ನೂ ತೋರದೆ ಹೋಗಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಆದರೆ, ಈ ಬಗ್ಗೆ ನಟ ಚಂದ್ರಪ್ರಭ ಸ್ಪಷ್ಟನೆ ನೀಡಿದ್ದಾರೆ.  ‘ಇಲ್ಲಿ ನನ್ನ ತಪ್ಪಿಲ್ಲ. ನಾನು ಗಾಯಾಳುನ ಚಿಕ್ಕಮಗಳೂರು ಆಸ್ಪತ್ರೆಗೆ ಸೇರಿಸಿದ ಬಳಿಕವೇ ತೆರಳಿದ್ದೇನೆ. ನಾನೇ ಕಾರು ಚಲಾಯಿಸುತ್ತಿದ್ದೆ ಎನ್ನುವ ವಿಚಾರವನ್ನು ಪೊಲೀಸರಿಗೂ ಹೇಳಿದ್ದೆ. ಅವರಿಗೆ ತಿಳಿಸಿ ನಂತರ ಹೊರಟಿದ್ದೆ. ಬೈಕ್ ಸವಾರನಿಗೆ ಗುದ್ದಿ ಹಾಗೆಯೇ ಹೋಗಿದ್ದೇನೆ ಎನ್ನುವ ಆರೋಪ ಸುಳ್ಳು’ ಎಂದಿದ್ದಾರೆ ಚಂದ್ರಪ್ರಭ. ನಾನು ಶೂಟಿಂಗ್ ಮುಗಿಸಿಕೊಂಡು ಬರುತ್ತಿದ್ದೆ, ಕುಡಿದು ಬೈಕ್ ಸವಾರನೇ ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ನಾನೇ ಅವರನ್ನು ಆಸ್ಪತ್ರೆಗೆ ದಾಖಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ

suddiyaana