ಅಲ್ಲು ಅರ್ಜುನ್ ಅಭಿಮಾನಿಗಳಿಂದ ಶಾಕಿಂಗ್ ನ್ಯೂಸ್ – ಪುಷ್ಪ 2 ಚಿತ್ರೀಕರಣ ನಿಲ್ಲಿಸಿದ್ದ ಚಿತ್ರತಂಡ

ಅಲ್ಲು ಅರ್ಜುನ್ ಅಭಿಮಾನಿಗಳಿಂದ ಶಾಕಿಂಗ್ ನ್ಯೂಸ್ – ಪುಷ್ಪ 2 ಚಿತ್ರೀಕರಣ ನಿಲ್ಲಿಸಿದ್ದ ಚಿತ್ರತಂಡ

ಟಾಲಿವುಡ್ ಬಹುನಿರೀಕ್ಷಿತ ಚಿತ್ರ ಪುಷ್ಪ 2. ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಇದೀಗ ಪಾರ್ಟ್ 2 ಸಿನಿಮಾಗಾಗಿ ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ. ಪುಷ್ಪ: ದಿ ರೂಲ್ ಸಿನಿಮಾದ ಚಿತ್ರೀಕರಣ ಕೂಡ ಭರ್ಜರಿಯಾಗಿ ನಡೆಯುತ್ತಿದೆ. ಆದರೆ ಚಿತ್ರತಂಡ ಶೂಟಿಂಗ್ ನಿಲ್ಲಿಸಿದೆ. ಅದಕ್ಕೆ ಕಾರಣ ಅಲ್ಲು ಅರ್ಜುನ್.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸೂಪರ್ ಡೂಪರ್ ಹಿಟ್ ಕಂಡಿದ್ದ ಪುಷ್ಪ ಚಿತ್ರ ಅಲ್ಲು ಅರ್ಜುನ್ ಗೆ ಅತ್ಯುತ್ತಮ ನಟ ಪ್ರಶಸ್ತಿ ತಂದುಕೊಟ್ಟಿತ್ತು. ಇದೀಗ ಪಾರ್ಟ್ 2 ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ಕೋಟ್ಯಂತರ ಅಭಿಮಾನಿಗಳು ಚಿತ್ರದ ಬಿಡುಗಡೆಗೆ ಕಾಯ್ತಿದ್ದಾರೆ. ಆದ್ರೀಗ ಚಿತ್ರತಂಡದಿಂದ ಶಾಕಿಂಗ್ ಸುದ್ದಿಯೊಂದು ಹೊರ ಬಿದ್ದಿದೆ. ನಟ ಅಲ್ಲು ಅರ್ಜುನ್ ಬೆನ್ನು ನೋವಿನ (Back pain) ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. ಪುಷ್ಪ 2 ಸಿನಿಮಾದ ಹಾಡಿನ ಚಿತ್ರೀಕರಣದಲ್ಲಿ ತೊಡಗಿದ್ದ ಅವರಿಗೆ ಏಕಾಏಕಿ ಬೆನ್ನು ನೋವು ಕಾಣಿಸಿಕೊಂಡಿದೆ. ಹಾಗಾಗಿ ಕೂಡಲೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಎರಡು ವಾರಗಳ ಕಾಲ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಪುಷ್ಪ 2 ಸಿನಿಮಾದ ಶೂಟಿಂಗ್ ಸ್ಥಗಿತಗೊಂಡಿದೆ.

ಇದನ್ನೂ ಓದಿ : 800 ಸಿನಿಮಾ ಕನ್ನಡದಲ್ಲೂ ರಿಲೀಸ್- ಬದುಕಿನ ಕಥೆ, ಸ್ಫೂರ್ತಿದಾಯಕ ಸಿನಿಮಾವಾಗಿದ್ದಕ್ಕೆ ಮುತ್ತಯ್ಯ ಮುರುಳೀಧರನ್ ಸಂತಸ

ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪುಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ. ಪುಷ್ಪ 2 ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಡಾನ್ಸ್ ಮಾಸ್ಟರ್ ಮತ್ತು ನಿರ್ದೇಶಕರು ಸಮಂತಾ ಜೊತೆ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಸಮಂತಾ ಕೂಡ ಆ ಹಾಡಿನಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರು ಮಾಡಲಿದ್ದಾರಂತೆ ಸಮಂತ. ನಿರ್ದೇಶಕ ಸುಕುಮಾರ್- ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಸೀಕ್ವೆಲ್ ಮೂಲಕ ಬೆಳ್ಳಿತೆರೆಯಲ್ಲಿ ಕಮಾಲ್ ಮಾಡಲು ಹೊರಟಿದೆ. ಪುಷ್ಪ 2 (Pushpa 2) ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿದೆ. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ.

 

Shantha Kumari