ಬಸ್‌ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ – 7 ಮಂದಿ ಸ್ಥಳದಲ್ಲೇ ಸಾವು

ಬಸ್‌ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ – 7 ಮಂದಿ ಸ್ಥಳದಲ್ಲೇ ಸಾವು

ಬಸ್‌ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಮುಸನೂರು ಟೋಲ್ ಪ್ಲಾಜಾ ಬಳಿ ಶನಿವಾರ ಬೆಳಗಿನ ಜಾವ ಅಪಘಾತ ಸಂಭವಿಸಿದೆ.  ಟೂರಿಸ್ಟ್ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಪ್ರಚೋದನಕಾರಿ ಹೇಳಿಕೆ – ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು

ಮಾಹಿತಿಗಳ ಪ್ರಕಾರ ಖಾಸಗಿ ಬಸ್ ಚೆನ್ನೈನಿಂದ ಹೈದರಾಬಾದ್​ಗೆ ಬರುತ್ತಿತ್ತು. ನೆಲ್ಲೂರು ಬಳಿ ಮೊದಲು ಟ್ರಕ್​ವೊಂದು ನಿಂತಿದ್ದ ರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬಸ್​ ಮಧ್ಯೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್​ನಲ್ಲಿದ್ದ ಚಾಲಕ ಸಮೇತ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ  ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿಸಿದ್ದಾರೆ.

ಇನ್ನು ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ರವಾನಿಸಿದರು. ಸುದ್ದಿ ತಿಳಿಯುತ್ತಿದ್ದಂತೆ ಹೈವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು. ಗಾಯಾಳುಗಳನ್ನು ಆ್ಯಂಬುಲೆನ್ಸ್​ ಮೂಲಕ ಆಸ್ಪತ್ರೆಗೆ ದಾಖಲಿಸಿದರು.

ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಮೃತರ ಪತ್ತೆ ಕಾರ್ಯ ಬಳಿಕ ಆಯಾ ಕುಟುಂಬಸ್ಥರಿಗೆ ಮಾಹಿತಿ ರವಾನಿಸುವ ಕಾರ್ಯ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಅಪಘಾತದ ಸ್ಥಳದಲ್ಲಿ ಅಪಘಾತಕ್ಕೀಡಾದ ವಾಹನಗಳನ್ನು ಕ್ರೇನ್​ ಮೂಲಕ ತೆರವು ಮಾಡುವ ಕಾರ್ಯಾಚರಣೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಈ ಮೂಲಕ ಸಾರಿಗೆ ಸಂಚಾರ ಸುಗಮಗೊಳಿಸುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Shwetha M