ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ – 11 ಮಂದಿ ಸಜೀವ ದಹನ

ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ – 11 ಮಂದಿ ಸಜೀವ ದಹನ

ಬಣ್ಣದ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ 11 ಕಾರ್ಮಿಕರ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ದೆಹಲಿಯ ಅಲಿಪುರದ ಮಾರುಕಟ್ಟೆಯಲ್ಲಿ ನಡೆದಿದೆ. 11 ಮಂದಿ ಕಾರ್ಮಿಕರ ಸುಟ್ಟ ಮೃತದೇಹಗಳು ಪತ್ತೆಯಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸರ್ಜಾಪುರ – ಹೆಬ್ಬಾಳ ನಮ್ಮ ಮೆಟ್ರೋ ಮಾರ್ಗಕ್ಕೆ ರೆಡಿಯಾಯ್ತು ರೂಪುರೇಷೆ!  

ಅಗ್ನಿ ಅವಘಡಕ್ಕೂ ಮುನ್ನ ಕಾರ್ಖಾನೆಯಲ್ಲಿ ಸ್ಪೋಟದ ಸದ್ದು ಕೇಳಿಬಂದಿತ್ತು. ಅಲ್ಲಿ ಸಂಗ್ರಹಿಸಿಡಲಾಗಿದ್ದ ರಾಸಾಯನಿಕಗಳಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬೆಂಕಿಯ ಜ್ವಾಲೆ ಪಕ್ಕದ ಮನೆ ಹಾಗೂ ಮುಕ್ತಿ ಕೇಂದ್ರಕ್ಕೂ ಹಬ್ಬಿದೆ.

ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸುವುದು ಕಷ್ಟಕರ ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಘಟನೆಯಲ್ಲಿ ನಾಲ್ವರು ಪೊಲೀಸ್ ಪೇದೆಗಳು ಗಾಯಗೊಂಡಿದ್ದಾರೆ.

Shwetha M