ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಕಾರು – ಓರ್ವ ವ್ಯಕ್ತಿ ಸಜೀವ ದಹನ

ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಕಾರು – ಓರ್ವ ವ್ಯಕ್ತಿ ಸಜೀವ ದಹನ

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ್ಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವವಾಗಿ ದಹನಗೊಂಡಿರುವ ಘಟನೆ ನೆಲಮಂಗಲದ ಅಂಚೇಪಾಳ್ಯದ ಬಳಿ ನಡೆದಿದೆ.

ಇದನ್ನೂ ಓದಿ: ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಅಂತಾ ನದಿಯಲ್ಲಿ ಕಾರು ಓಡಿಸಿದ! – ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆತನಿಗೆ ಕಾದಿತ್ತು ಶಾಕ್!‌

ಮಂಗಳವಾರ ಸಂಜೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಮಾರುತಿ ಎಕ್ಸ್ಎಲ್ 6 ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ ಬರಲು ಸಾಧ್ಯವಾಗದೇ ಕೂತಲ್ಲೇ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆಯಿಂದಾಗಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಪರಿಶಿಲನೆ ನಡೆಸುತ್ತಿದ್ದಾರೆ. ಹೈಬ್ರಿಡ್/ಪೆಟ್ರೋಲ್ ಎಕ್ಸ್ಎಲ್ 6 ಕಾರು ಅನಿಲ್ ಕುಮಾರ್ ಟಿ ಅವರಿಗೆ ಸೇರಿದ್ದು, ಬೆಂಗಳೂರು ಉತ್ತರ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ ಎಂದು ಹೇಳಲಾಗುತ್ತಿದೆ.

Shwetha M