ಎಂ. ಪಿ ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ – ಬಿಜೆಪಿ ಕಾರ್ಯಕರ್ತರು ಸಿಡಿದಿದ್ದೇಕೆ?

ಎಂ. ಪಿ ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ – ಬಿಜೆಪಿ ಕಾರ್ಯಕರ್ತರು ಸಿಡಿದಿದ್ದೇಕೆ?

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಟಿಕೆಟ್ ಗಾಗಿ ಫೈಟ್ ಜೋರಾಗಿದ್ದು, ಇದೀಗ ಕಾರ್ಯಕರ್ತರ ನಡುವೆ ಅಸಮಾಧಾನ ಸ್ಫೋಟವಾಗಿದೆ. ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ರಸ್ತೆಯಲ್ಲೇ ಗುರುವಾರ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನ 135 ಅಭ್ಯರ್ಥಿಗಳ ಫಸ್ಟ್ ಲಿಸ್ಟ್ ಲೀಕ್ – ಯಾರಿಗೆಲ್ಲಾ ಅವಕಾಶ ಸಿಕ್ಕಿದೆ ಗೊತ್ತಾ..?

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಜಯ ಸಂಕಲ್ಪಯಾತ್ರೆ ಮೂಡಿಗೆರೆಯಲ್ಲಿ ನಡೆದಿದೆ. ಬಿ.ಎಸ್. ಯಡಿಯೂರಪ್ಪ ಅವರು ಬರುವ ಮಾರ್ಗದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು, ಮುಖಂಡರು ರಸ್ತೆ ಅಡ್ಡಗಟ್ಟಿ ಕೂಗಾಟ ನಡೆಸಿದ್ದಾರೆ.

‘ಕುಮಾರಸ್ವಾಮಿ ಬೇಡವೇ ಬೇಡ, ಹೊಸ ಮುಖಕ್ಕೆ ಟಿಕೆಟ್ ಕೊಡಿ’ ಅಂತಾ ಕಾರ್ಯಕರ್ತರು ಕೂಗಾಡಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೊಲೀಸರು ಶಾಸಕ ಕುಮಾರಸ್ವಾಮಿ ಅವರನ್ನು ಬೇರೆ ಕಡೆ ಕರೆದೊಯ್ದಿದ್ದಾರೆ.

ವಿಜಯ ಸಂಕಲ್ಪಯಾತ್ರೆ ಅಂಗವಾಗಿ ಮೂಡಿಗೆರೆಯಲ್ಲಿ ಇಂದು ಮಧ್ಯಾಹ್ನ ರೋಡ್ ಶೋ ನಡೆದಿದೆ. ಇದಕ್ಕೂ ಮುನ್ನ ಮೂಡಿಗೆರೆ ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಬಂಡಾಯ ಗುಂಪಿನಿಂದ ಪ್ರತ್ಯೇಕ ಸಭೆ ನಡೆದಿದೆ.

suddiyaana