ನಟ ಶಿವರಾಜ್ ಕುಮಾರ್‌ಗೆ ಅನಾರೋಗ್ಯ – ಆಸ್ಪತ್ರೆಯಿಂದ ಡಿಸ್ಚಾರ್ಜ್, ಆತಂಕ ಬೇಡ ಎಂದ ವೈದ್ಯರು

ನಟ ಶಿವರಾಜ್ ಕುಮಾರ್‌ಗೆ ಅನಾರೋಗ್ಯ – ಆಸ್ಪತ್ರೆಯಿಂದ ಡಿಸ್ಚಾರ್ಜ್, ಆತಂಕ ಬೇಡ ಎಂದ ವೈದ್ಯರು

ಸ್ಯಾಂಡಲ್‌ವುಡ್ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವುಂಟಾಗಿದ್ದು, ಅಭಿಮಾನಿಗಳು ಹೆದರುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಕೂಡಲೇ ಶಿವರಾಜ್ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಜೊತೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಇದನ್ನೂ ಓದಿ:  ಕುಸ್ತಿಯಲ್ಲಿ ಗೆದ್ದರೂ ಸಂಗೀತಾಗೆ ಸಿಕ್ಕಿದ್ದು ‘ಕಳಪೆ’ – ಯಾರಿಗೂ ಗೌರವ ನೀಡದ ಕಾರಣಕ್ಕೆ ಕಳಪೆ ಕೊಟ್ಟಿದ್ದೇವೆ ಎಂದ ವಿನಯ್ ಟೀಮ್

ನಟ ಶಿವರಾಜ್ ಕುಮಾರ್ ಅವರು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಶೂಟಿಂಗ್ ನಲ್ಲಿ ಶಿವಣ್ಣ ಪಾಲ್ಗೊಂಡಿದ್ದರು. ಮಳೆಯಲ್ಲಿ ನೆನೆದಿದ್ದರಿಂದ ಹೆಚ್ಚು ಸುಸ್ತಾಗಿದ್ದರು ಎನ್ನುವ ಮಾಹಿತಿ ಸಿಕ್ಕಿದೆ. ಶಿವಣ್ಣಗೆ ತೀವ್ರ ಸುಸ್ತಾಗುತ್ತಿದ್ದಂತೆಯೇ ಅವರನ್ನು ಕೂಡಲೇ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಅವರಿಗೆ ಶುಕ್ರವಾರವೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಿದ್ದಾರೆ. ಸದ್ಯ ಮನೆಯಲ್ಲಿ ಶಿವಣ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ಶಿವರಾಜ್ ಕುಮಾರ್ ಅವರನ್ನು ತಪಾಸಣೆ ಮಾಡಿದ ವೈದ್ಯರು ಕೂಡಾ ಆತಂಕ ಪಡುವಂಥದ್ದು ಏನೂ ಆಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದಲೂ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು. ಆದರೆ, ಶುಕ್ರವಾರ ಜ್ವರ ತುಸು ಹೆಚ್ಚಾದ ಕಾರಣ ಅವರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು.

ಈ ಹಿಂದೆ ಶಿವಣ್ಣಗೆ ಹೃದಯ ಸಂಬಂಧಿ ಸಮಸ್ಯೆ ಎದುರಾಗಿತ್ತು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ಆತಂಕ ಮೂಡಿತ್ತು. ಸದ್ಯ ಶಿವಣ್ಣ ಆರಾಮಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಅವರು ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. 61 ವರ್ಷ ವಯಸ್ಸಿನಲ್ಲಿಯೂ ಎನರ್ಜೆಟಿಕ್ ಆಗಿದ್ದಾರೆ ಶಿವರಾಜ್ ಕುಮಾರ್. ವೈದ್ಯರ ಸಲಹೆ ಮೇರೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುತ್ತಾರೆ.

Sulekha