ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಬೆನ್ನಲ್ಲೇ ವಿಜಯೇಂದ್ರ ಆಕ್ಟೀವ್ – ಕಾರ್ಯಕರ್ತನ ಮನೆಗೆ ತೆರಳಿ ಸಂಘಟನೆಯ ಬಗ್ಗೆ ಚರ್ಚೆ!

ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಬೆನ್ನಲ್ಲೇ ವಿಜಯೇಂದ್ರ ಆಕ್ಟೀವ್ – ಕಾರ್ಯಕರ್ತನ ಮನೆಗೆ ತೆರಳಿ ಸಂಘಟನೆಯ ಬಗ್ಗೆ ಚರ್ಚೆ!

ಬೆಂಗಳೂರು: ಬಿಜೆಪಿ ರಾಜಾಧ್ಯಕ್ಷರಾಗಿ ಆಯ್ಕೆಗೊಂಡ ಬೆನ್ನಲ್ಲೇ ಬಿ.ವೈ ವಿಜಯೇಂದ್ರ ಫುಲ್ ಆಕ್ವೀವ್ ಆಗಿದ್ದಾರೆ. ಶನಿವಾರ ಬೆಳಗ್ಗೆಯಿಂದಲೇ ತಮ್ಮ ಕೆಲಸ ಶುರುಮಾಡಿದ್ದಾರೆ. ಬೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ನೀಡುವ ಮೂಲಕ ಸಂಘಟನೆಯಲ್ಲಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಹೌದು, ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮರುದಿನವೇ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬೆಳ್ಳಂಬೆಳಗ್ಗೆ  ಭೇಟಿ ನೀಡಿದ್ದಾರೆ. ಅಲ್ಲದೇ ಕಾರ್ಯಕರ್ತರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಮೊದಲ ಆದ್ಯತೆ ಕಾರ್ಯಕರ್ತರು ಎಂಬ ಸಂದೇಶ ರವಾನೆ ಮಾಡಿದ್ದಾರೆ.

ಇದನ್ನೂ ಓದಿ: ದೀಪಾವಳಿಗೆ ಬಿ.ಎಸ್‌ ಯಡಿಯೂರಪ್ಪಗೆ ಬಿಗ್ ಗಿಫ್ಟ್‌‌! – ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ

ಶಶಿಧರ್‌ ಮನೆಗೆ ಭೇಟಿ ಕೊಟ್ಟ ವಿಜಯೇಂದ್ರ  ಪಕ್ಷದ ಶಾಲು ಹಾಕಿ ಕಾರ್ಯಕರ್ತನನ್ನು ಸನ್ಮಾನಿಸಿದ್ದಾರೆ. ಬಳಿಕ ಪಕ್ಷದ ಬೂತ್ ಮಟ್ಟದ ಸಂಘಟನೆಯ ಬಗ್ಗೆ ಅವರ ಬಳಿ ಚರ್ಚೆ ನಡೆಸಿದ್ದಾರೆ. ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯ ಮೂಡಿಸುವ ನಿಟ್ಟಿನಲ್ಲಿ ವಿಜಯೇಂದ್ರ ಈ ಪ್ರಯತ್ನ ಆರಂಭಿಸಿದ್ದಾರೆ.

ವಿಜಯೇಂದ್ರ ಆಯ್ಕೆ ಕುರಿತು ಪ್ರತಿಕ್ರಿಯಿಸಿದ ಕಾರ್ಯಕರ್ತ ಶಶಿಧರ್‌, ವಿಜಯೇಂದ್ರ ಅವರು ಯುವಕರಿದ್ದಾರೆ. ತಂದೆಯ ಅನುಭವ ಹೊಂದಿದ್ದಾರೆ. ನಿನ್ನೆ ಬರ್ತೀನಿ ಅಂದಿದ್ದರು. ನಂಗೆ ತುಂಬಾ ಖುಷಿಯಾಗಿದೆ ಎಂದು ಹೇಳಿದರು. ಆಯ್ಕೆಯಾದ ಕೂಡಲೇ ಸ್ಥಳೀಯ ಕಾರ್ಯಕರ್ತರ ಭೇಟಿಗೆ ಬರ್ತಾ ಇದ್ದಾರೆ. ಇದರಿಂದ ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಯುವಕರು ರಾಜ್ಯಾಧ್ಯಕ್ಷರಾಗಿರುವುದು ಖುಷಿ ಕೊಟ್ಟಿದೆ ಎಂದು ಶಶಿಧರ್‌ ತಿಳಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಆಯ್ಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದರು. ಆಯ್ಕೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ವಿಜಯೇಂದ್ರಗೆ ಫೋನ್‌ ಕರೆ ಮಾಡಿ ಶುಭಾಶಯ ತಿಳಿಸಿದರು. ಪಕ್ಷ ಸಂಘಟನೆ ಮಾಡುವಂತೆ ಸಲಹೆ ನೀಡಿದರು. ಬಳಿಕ ವಿಜಯೇಂದ್ರ ಅವರು ತಂದೆ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Shwetha M