ಲೋಕಸಭಾ ಫಲಿತಾಂಶದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ಮನೆ ಮೇಲೆ ಅಟ್ಯಾಕ್‌ !

ಲೋಕಸಭಾ ಫಲಿತಾಂಶದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ಮನೆ ಮೇಲೆ ಅಟ್ಯಾಕ್‌ !

ಚಿಕ್ಕಬಳ್ಳಾಪುರ  ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ನಡೆದಿದೆ. ಮಂಗಳವಾರ ತಡ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ  ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರಿಗೆ ಚೌಟ.. ಉಡುಪಿಗೆ ಕೋಟ – ಸೌಜನ್ಯಗಾಗಿ ಬಿದ್ದ NOTA ಮತಗಳೆಷ್ಟು?

ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಗೃಹ ಕಚೇರಿ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಳೆದ ರಾತ್ರಿ 10:30 ರಿಂದ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು,  ಮನೆಯ ಬೃಹತ್ ಗಾತ್ರದ ಕಿಟಕಿ ಗಾಜು ಪುಡಿಪುಡಿಯಾಗಿದೆ.

ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಡಾ.ಕೆ ಸುಧಾಕರ್ ಗೆಲುವು ಪಡೆದ ಹಿನ್ನೆಲೆಯಲ್ಲಿ ಶಾಸಕರ ಮನೆ ಮೇಲೆ ಕಲ್ಲು ತೂರಾಟ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮನೆಗೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ವೃತ್ತ ನಿರೀಕ್ಷಕ ಮಂಜುನಾಥ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯ ಹಿಂಭಾಗದಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.

Shwetha M