ಆದಿಪುರುಷ್ ಚಿತ್ರದ ಬ್ಯಾನ್​ಗೆ ವ್ಯಾಪಕ ಆಗ್ರಹ! – ಭಾರತದಲ್ಲೂ ಬ್ಯಾನ್‌ ಮಾಡಲು ಪ್ರಧಾನಿ ಮೋದಿಗೆ ಪತ್ರ

ಆದಿಪುರುಷ್ ಚಿತ್ರದ ಬ್ಯಾನ್​ಗೆ ವ್ಯಾಪಕ ಆಗ್ರಹ! – ಭಾರತದಲ್ಲೂ ಬ್ಯಾನ್‌ ಮಾಡಲು ಪ್ರಧಾನಿ ಮೋದಿಗೆ ಪತ್ರ

ಆದಿಪುರುಷ್ ಸಿನಿಮಾ ರಿಲೀಸ್ ಆಗಿದ್ದೆ ಆಗಿದ್ದು. ಈ ಸಿನಿಮಾ ಸುತ್ತಲೂ ಸಾಕಷ್ಟು ವಿವಾದಗಳೇ ಹುಟ್ಟಿಕೊಂಡಿವೆ. ರಾಮಾಯಣವನ್ನೆ ತಿರುಚಲಾಗಿದೆ. ಇದು ರಾಮಾಯಣ ಕತೆಯೇ ಅಲ್ಲ. ನಿರ್ದೇಶಕರು ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಾರೆಂದು ಎಂಬ ಋಣಾತ್ಮಕ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ನೇಪಾಳದಲ್ಲೂ ಕೂಡ ಚಿತ್ರವನ್ನು ಬ್ಯಾನ್‌ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತದಲ್ಲೂ ಕೂಡ ಬ್ಯಾನ್‌ ಮಾಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ಆದಿಪುರುಷ್ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಅನೇಕರು ಆರೋಪಗಳು ಕೇಳಿಬರುತ್ತಿವೆ. ಇದೀಗ ಈ ಚಿತ್ರವನ್ನು ಥಿಯೇಟರ್ ಹಾಗೂ ಒಟಿಟಿಯಲ್ಲಿ ಬ್ಯಾನ್ ಮಾಡುವಂತೆ ‘ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್’  ​​​​ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಇದನ್ನೂ ಓದಿ: ಆದಿಪುರುಷ್ ವಿವಾದ – ಭಾರತೀಯ ಚಲನಚಿತ್ರಗಳು ಕಠ್ಮಂಡುವಿನಲ್ಲಿ ಬ್ಯಾನ್!

ಆದಿಪುರುಷ್  ಚಿತ್ರದಲ್ಲಿ ವಿವಾದ ಹುಟ್ಟು ಹಾಕುವಂಥ ಸಾಕಷ್ಟು ವಿಚಾರಗಳು ಕಾಣಿಸಿವೆ. ರಾವಣ ಪುಷ್ಪಕ ವಿಮಾನದ ಬದಲು ಬಾವಲಿ ಸಾಕುತ್ತಾನೆ ಮತ್ತು ಅದಕ್ಕೆ ಮಾಂಸ ಹಾಕುತ್ತಾನೆ. ಬ್ರಾಹ್ಮಣನಾಗಿ ರಾವಣನ ಕೈಯಲ್ಲಿ ಮಾಂಸ ಮುಟ್ಟಿಸಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆಯನ್ನು ಅನೇಕರು ಕೇಳಿದ್ದಾರೆ. ಚಿತ್ರದಲ್ಲಿ ಗ್ಲಾಮರ್ ತೋರಿಸುವ ಪ್ರಯತ್ನ ಆಗಿದೆ. ಕಥೆಯನ್ನು ಮನಸ್ಸಿಗೆ ಬಂದಂತೆ ಕಟ್ಟಿಕೊಡಲಾಗಿದೆ. ಹೀಗೆ ಹೇಳುತ್ತಾ ಹೋದರೆ ಟೀಕೆಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಹೀಗಾಗಿ ಆದಿಪುರುಷ್ ಚಿತ್ರವನ್ನು ಬ್ಯಾನ್ ಮಾಡಬೇಕು ಎನ್ನುವ ಆಗ್ರಹ ಜೋರಾಗಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ‘ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್’ ಪತ್ರ ಬರೆದಿದೆ.

ಇನ್ನು ಈ ಸಿನಿಮಾದಲ್ಲಿ ಚಿತ್ರದ ಕಥೆ ಹಾಗೂ ಸಂಭಾಷಣೆ ರಾಮ ಹಾಗೂ ಹನುಮಂತನ ವರ್ಚಸ್ಸಿಗೆ ಧಕ್ಕೆ ತರುವಂತಿದೆ. ಹಿಂದೂಗಳ ಭಾವನೆಗಳಿಗೆ ಧಕ್ಕೆ ಆಗುವ ರೀತಿಯಲ್ಲಿ ಸಿನಿಮಾ ಇದೆ. ಈ ಚಿತ್ರದ ಸಂಭಾಷಣೆ ಎಲ್ಲರಿಗೂ ನೋವುಂಟು ಮಾಡುವ ರೀತಿಯಲ್ಲಿದೆ. ನಿರ್ದೇಶಕ ಓಂ ರಾವತ್, ಚಿತ್ರಕಥೆ ಸಂಭಾಷಣೆ ಬರೆದ ಮನೋಜ್ ಮುಂತಾಶಿರ್ ಶುಕ್ಲಾ ಹಾಗೂ ಚಿತ್ರದ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲಾಗಬೇಕು. ಈ ರೀತಿಯ ಸಿನಿಮಾಗಳಲ್ಲಿ ಪ್ರಭಾಸ್, ಕೃತಿ ಸನೋನ್ ಹಾಗೂ ಸೈಫ್ ಅಲಿ ಖಾನ್ ನಟಿಸಬಾರದಿತ್ತು. ರಾಮಾಯಣ ಹಾಗೂ ಶ್ರೀರಾಮನ ಬಗ್ಗೆ ಇರುವ ನಂಬಿಕೆಯನ್ನು ನಾಶ ಮಾಡುವ ಸಿನಿಮಾ ಇದು . ಈ ಚಿತ್ರ ಥಿಯೇಟರ್ ಹಾಗೂ ಮುಂಬರುವ ದಿನಗಳಲ್ಲಿ ಒಟಿಟಿಯಲ್ಲಿ ಪ್ರದರ್ಶನ ಕಾಣಬಾರದು ಎಂದು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

suddiyaana