ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ಮತಬೇಟೆ – ಭರ್ಜರಿ ರೋಡ್ ಶೋ

ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ಮತಬೇಟೆ – ಭರ್ಜರಿ ರೋಡ್ ಶೋ

ಕೇಂದ್ರ ಗೃಹಸಚಿವ ಅಮಿತ್ ಶಾ ಮೈಸೂರಿನಲ್ಲಿ ಕೇಸರಿ ಕಹಳೆ ಮೊಳಗಿಸಿದ್ದಾರೆ. ಏಪ್ರಿಲ್ 24 ಮತ್ತು ಏಪ್ರಿಲ್ 25ರಂದು ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ಚಾಣಕ್ಯ ಅಮಿತ್ ಶಾ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಮಿತ್ ಶಾ ಮೈಸೂರಿಗೆ ಆಗಮಿಸಿದಾಗ ಸ್ವಾಗತಿಸಲು ಬಂದ ಶಾಸಕ ರಾಮದಾಸ್ ಅವರಿಗೆ ಪ್ರೀತಿಯ ಅಪ್ಪುಗೆ ಸಿಕ್ಕಿದೆ. ಅಮಿತ್ ಶಾ ಅವರು ರಾಮದಾಸ್ ಅವರಿಗೆ ಆತ್ಮೀಯ ಅಪ್ಪುಗೆ ನೀಡಿದರು.

ಇದನ್ನೂ ಓದಿ: ಚುನಾವಣಾ ಹೊಸ್ತಿಲಲ್ಲೇ ಐಟಿ, ಲೋಕಾಯುಕ್ತ ರೇಡ್ – ಕಂತೆ ಕಂತೆ ಹಣ, ಚಿನ್ನ, ಬೆಳ್ಳಿ ಪತ್ತೆ!

ಕೇಂದ್ರ ಗೃಹ ಸಚಿವ ಅಮಿತ್ ಶಾ, ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಚುನಾವಣಾ ಪ್ರಚಾರಕ್ಕೆ ಆಗಮಿಸಿದರು. ಗುಂಡ್ಲುಪೇಟೆಗೆ ಆಗಮಿಸಿದ ಅಮಿತ್ ಶಾ, ಪ್ರಚಾರಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಿರುವ ವಾಹನವನ್ನೇರಿದರು. ಅಮಿತ್ ಶಾ ಬಲಭಾಗದಲ್ಲಿ ಅಭ್ಯರ್ಥಿ ನಿರಂಜನ್ ಕುಮಾರ್ ಇದ್ದರೆ ಎಡಭಾಗದಲ್ಲಿ ಸಂಸದ ಪ್ರತಾಪ್ ಸಿಂಹ ಇದ್ದರು. ಗುಂಡ್ಲುಪೇಟೆ ಮತಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಸಿಎಸ್ ನಿರಂಜನ್ ಕುಮಾರ್ ಪರ ಮತ ಯಾಚಿಸಿದರು. ಸುಡುವ ಬಿಸಿಲನ್ನು ಲೆಕ್ಕಿಸದೆ ಸಹಸ್ರಾರು ಜನ ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.

suddiyaana