ಗೌತಮ್ ಭೂಮಿ ಒಂದಾಗೋ ಹೊತ್ತಲ್ಲೇ ಶಾಕ್! – ಕೇಡಿ ಜೈದೇವ್ ಜೊತೆ ಕೈ ಜೋಡಿಸಿದ ಎಂಎಲ್ಎ

ಅಮೃತಧಾರೆ ಸೀರಿಯಲ್ ಈಗ ರೋಚಕ ತಿರುವು ಪಡೆದುಕೊಳ್ತಿದೆ. ಶಕುಂತಾ ಕುತಂತ್ರದಿಂದಾಗಿ ಭೂಮಿಕಾ ಮನೆ ಬಿಟ್ಟು ಹೋಗಿದ್ಲು. ಮುದ್ದಿನ ಮಡದಿಗಾಗಿ ಗೌತಮ್ ಕೂಡ ಇರೋ ಆಸ್ತಿ, ಐಶ್ವರ್ಯಗಳನ್ನ ಬಿಟ್ಟು ಡ್ರೈವರ್ ಆಗಿದ್ದ. ಆದ್ರೀಗ ಗೌತಮ್ ಭೂಮಿ ಒಂದಾಗೋ ಕಾಲ ಹತ್ತಿರವಾಗಿದೆ. ಒಂದೇ ವಠಾರದಲ್ಲಿರೋ ಈ ದಂಪತಿ ಈಗ ಮಕ್ಕಳಿಂದಾಗಿ ಹತ್ತಿರವಾಗಿದ್ದಾರೆ. ಹೀಗಿರುವಾಗಲೇ ಒಂದು ದೊಡ್ಡ ಬೆಳವಣಿಗೆ ನಡೆದಿದೆ. ಜಯದೇವ್ ಕಿತಾಪತಿ ಶುರು ಮಾಡಿದ್ದಾನೆ.
ಇದನ್ನೂ ಓದಿ: ಬಟ್ಟೆ ಎಸೆದ ಗಿಲ್ಲಿಗೆ ಹೊಡೆದ ರಿಷಾ! – ಗಿಲ್ಲಿನಟ ಮೇಲೆ ಕೈ ಮಾಡಿದ ನಟಿ ದೊಡ್ಮನೆಯಿಂದ ಔಟ್?
ಗೌತಮ್, ಶಕುಂತಲಾಳ ಮಲ ಮಗ. ಜಯದೇವ್ಗೆ ಮಲ ಅಣ್ಣ. ಶಕುಂತಲಾ ಹಾಗೂ ಅವಳ ಮಗ ಜಯದೇವ್ ಒಟ್ಟಾಗಿ ಗೌತಮ್ ವಿರುದ್ಧ ಹಗೆ ತೀರಿಸುತ್ತಾ ಬರುತ್ತಿದ್ದಾರೆ. ಈ ಮೊದಲು ಗೌತಮ್ ಪತ್ನಿ ಭೂಮಿಕಾ ಕುಶಾಲನಗರದಲ್ಲಿ ಇದ್ದಾಗ ಎಂಎಲ್ಎ ಜೊತೆ ಕಿರಿಕ್ ಆಗಿತ್ತು. ಈ ಕಿರಿಕ್ನ ಸರಿಪಡಿಸಿಕೊಳ್ಳಲು ಸಾಧ್ಯವಾಗದೆ ಭೂಮಿಕಾ ಅಲ್ಲಿಂದ ಬಿಟ್ಟು ಬಂದಿದ್ದಳು. ಆ ಸಮಯದಲ್ಲಿ ಗೌತಮ್ ನೇರವಾಗಿ ಹೋಗಿ ಎಂಎಲ್ಗೆ ಅವಾಜ್ ಹಾಕಿ ಬಂದಿದ್ದ. ಈ ಅವಮಾನವನ್ನು ಎಂಎಲ್ಎ ಮರೆತಿಲ್ಲ. ಈ ಕಾರಣದಿಂದಲೇ ಅವನು ಸೇಡು ತೀರಿಸಿಕೊಳ್ಳಬೇಕು ಎಂದು ಸಾಕಷ್ಟು ಪ್ರಯತ್ನಿಸುತ್ತಿದ್ದಾನೆ. ಈಗ ಜಯದೇವ ಇದಕ್ಕೆ ಕೈ ಜೋಡಿಸಿದ್ದಾನೆ. ಆತನು ಗೌತಮ್ ಎಲ್ಲಿದ್ದಾನೆ ಎಂಬುದನ್ನು ಹಡುಕಿಸುತ್ತಿದ್ದಾನೆ. ಈ ಮಧ್ಯೆ ಮತ್ತೊಂದು ಬೆಳವಣಿಗೆ ನಡೆದಿದೆ.
ಭೂಮಿಕಾ ಹಾಗೂ ಎಂಎಲ್ಎ ಮಧ್ಯೆ ಕಿರಿಕ್ ಆಗಿದ್ದು, ಭೂಮಿಕಾ ಅಲ್ಲಿಂದ ಬಿಟ್ಟು ಹೋಗಿದ್ದು ಎಲ್ಲಾ ವಿಚಾರ ಜಯದೇವ್ ಕಿವಿಗೆ ಬಿದ್ದಿದೆ. ಈ ಕಾರಣದಿಂದಲೇ ಜಯದೇವ್ ನೇರವಾಗಿ ಹೋಗಿ ಎಂಎಲ್ಎ ಜೊತೆ ಕೈ ಜೋಡಿಸಿದ್ದಾನೆ. ಈ ವಿಚಾರವನ್ನು ಜಯದೇವ್ ಮಾವ ಲಕ್ಷ್ಮೀಕಾಂತ ಶೀಘ್ರವೇ ಗೌತಮ್ಗೆ ತಲುಪಿಸೋ ಸಾಧ್ಯತೆ ಇದೆ. ಮುಂದೆ ಕಥೆ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಈಗಾಗಲೇ ಗೌತಮ್ ಹಾಗೂ ಭೂಮಿಕಾ ಮಧ್ಯೆ ಪ್ರೀತಿ ಬೆಳೆಯುತ್ತಿದೆ. ಈ ಸಮಯದಲ್ಲಿ ಯಾರಾದರೂ ಇವರ ಮಧ್ಯೆ ಬಂದರೆ ಅವರನ್ನು ಗೌತಮ್ ಸುಮ್ಮನೆ ಬಿಡೋದಿಲ್ಲ. ಈಗಾಗಲೇ ದಯೆ ತೋರಿ ಜಯದೇವ್ನ ಬಿಟ್ಟಿದ್ದ ಗೌತಮ್. ಆದರೆ, ಇನ್ನುಮುಂದೆ ಅವನು ಆ ರೀತಿ ಮಾಡೋದು ಅನುಮಾನ. ಕುತಂತ್ರಿಗಳಿಗೆ ಸರಿಯಾಗಿ ಪಾಠ ಕಲಿಸೋದು ಫಿಕ್ಸ್ ಆಗಿದೆ.

ನೋಡಿರಿ

