ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ಕಾಡಾನೆ ದಾಳಿ – ಸಿನಿಮೀಯ ರೀತಿಯಲ್ಲಿ ಪಾರಾದ ರೈತರು

ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ಕಾಡಾನೆ ದಾಳಿ – ಸಿನಿಮೀಯ ರೀತಿಯಲ್ಲಿ ಪಾರಾದ ರೈತರು

ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ದಿನದಿಂದ ದಿನಕ್ಕೆ ಕಾಡಾನೆಗಳು ಕೃಷಿ ಪ್ರದೇಶಗಳಿಗೆ ಆಗಮಿಸಿ ಬೆಳೆ ಹಾನಿ ಮಾಡುತ್ತಿವೆ. ರೈತರ ಮೇಲೆ ದಾಳಿ ಮಾಡುತ್ತಲೇ ಇವೆ. ಮಲೆನಾಡಿನ ರೈತರನ್ನು ಜೀವಭಯದಲ್ಲಿರಿಸಿರುವ ಕಾಡಾನೆ ‘ಕರಡಿ’ ಕೂಲಿ ಕೆಲಸಗಾರನ ಮೇಲೆ ದಾಳಿ ಮಾಡಿದೆ. ರೈತ ಕೂದಲೆಳೆ ಅಂತರದಲ್ಲಿ ಆತ ಪಾರಾದ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಆನೆ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪೈಶಾಚಿಕ ಕೃತ್ಯ – ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಸಕಲೇಶಪುರ ತಾಲ್ಲೂಕಿನ, ಕೆಸಗುಲಿ ಗ್ರಾಮದ ಪಿಂಟು ಎಸ್ಟೇಟ್‌ನ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಅಡಿಕೆ ತೋಟದಲ್ಲಿ ರೈತರು ಕೆಲಸ ಮಾಡುತ್ತಿದ್ದಾಗ ಅವರ ಗಮನಕ್ಕೆ ಬಾರದಂತೆ ಕಾಡಾನೆ ಸಮೀಪಕ್ಕೆ ಬಂದಿದೆ. ರೈತನ ಅರಿವಿಗೆ ಬರುತ್ತಿದ್ದಂತೆ ಆನೆಯು ಏಕಾಏಕಿ ದಾಳಿ ನಡೆಸಿದೆ. ತಕ್ಷಣ ಎಚ್ಚೆತ್ತ ರೈತ ಅಲ್ಲಿಂದ ಓಡಿದ್ದಾರೆ. ಅವರಲ್ಲಿ ಒಬ್ಬನ ಬೆನ್ನು ಹತ್ತಿದ ಆನೆ ಸೊಂಡಿಲಿನಿಂದ ಬೀಸಿದ್ದು, ಒಬ್ಬಾತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ನಂತರ ಇನ್ನೊಬ್ಬನ‌ ಮೇಲೆ ದಾಳಿ‌ ಮಾಡಿದ ಆನೆಯು ಆತನನ್ನು ಅಟ್ಟಿಸಿಕೊಂಡು ಹೋಗಿದೆ. ಆತ ಓಡಿ ಮನೆಯೊಳಗೆ ಹೋಗಿ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಕೆಳಗೆ ಹೋಗಿ ಮಲಗಿ ಪಾರಾಗಿದ್ದಾನೆ.

ಇದೇ ಆನೆ ಜ.4 ರಂದು ಬೇಲೂರು ತಾಲ್ಲೂಕಿನ, ಮತ್ತಾವರದಲ್ಲಿ ವಂಸತ್ ಎಂಬುವವರನ್ನು ಬಲಿ ಪಡೆದಿತ್ತು. ಅಲ್ಲದೆ ಕಳೆದ ಹದಿನೈದು ದಿನಗಳ ಹಿಂದೆ ಹೆಬ್ಬನಹಳ್ಳಿಯಲ್ಲಿ ಮೂವರ ಮೇಲೆ ದಾಳಿ ಮಾಡಿತ್ತು.

Shwetha M