ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಹತ್ವದ ಸುಳಿವು ಪತ್ತೆ..!

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಹತ್ವದ ಸುಳಿವು ಪತ್ತೆ..!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿ ಈಗಾಗಲೇ ಮೂರು ವರ್ಷಗಳು ಕಳೆದಿದೆ. ನಟನ ಸಾವಿನ ಬಗ್ಗೆ ಈಗಲೂ ಅನೇಕ ಪ್ರಶ್ನೆಗಳು ಅಭಿಮಾನಿಗಳನ್ನು ಕಾಡುತ್ತಲೇ ಇದೆ. ಜೊತೆಗೆ ಅಭಿಮಾನಿಗಳಿಗೆ ಇವತ್ತಿಗೂ ಸುಶಾಂತ್ ಸಿಂಗ್ ಸಾವಿನ ಕಹಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೀಗ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ರಜಪೂತ್ ಮೃತದೇಹದ ಮೇಲಿತ್ತು ಗಾಯದ ಗುರುತು – ಮತ್ತೊಂದು ಗಂಭೀರ ಆರೋಪ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಮುಂಬೈ ಪೊಲೀಸರು  ಹಾಗೂ ಸಿಬಿಐ ತನಿಖೆ ನಡೆಸುತ್ತಲೇ ಇದೆ. ಆದರೆ ಈವರೆಗೆ ಸುಶಾಂತ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಈಗ ಈ ಪ್ರಕರಣದಲ್ಲಿ ಮಹತ್ವದ ಸುಳಿವೊಂದು ತನಿಖಾ ಸಂಸ್ಥೆಗೆ ಲಭ್ಯವಾಗಿದೆಯಂತೆ. ಹೀಗೆಂದು ಸ್ವತಃ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ದಿಶಾ ಸಾಲಿಯಾನ್ ಹಾಗೂ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿವೆ. ಆದರೆ ಆ ಸಾಕ್ಷ್ಯಗಳು ನಿಖರವೇ, ನಂಬಲರ್ಹವೇ, ಸತ್ಯವಾದುವೇ ಎಂಬ ಪರಿಶೀಲನೆ ನಡೆಯುತ್ತಿವೆ. ಕೆಲವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ, ಕೆಲವರ ಹೇಳಿಕೆ ದಾಖಲಿಸಿಕೊಳ್ಳುವುದು ಹಾಗೂ ಸಾಕ್ಷ್ಯಗಳ ಪರಿಶೀಲನೆ ಬಾಕಿ ಇದೆ ಎಂದಿದ್ದಾರೆ. ಸುಶಾಂತ್ ಸಿಂಗ್ ಹಾಗೂ ದಿಶಾ ಸಾಲಿಯಾನ್ ಪ್ರಕರಣದ ತನಿಖೆಯಲ್ಲಿ ಅಂತಿಮ ವರದಿ ಇನ್ನೂ ಸಲ್ಲಿಸಿಲ್ಲ, ಈಗಲೂ ತನಿಖೆ ಚಾಲ್ತಿಯಲ್ಲಿದೆ. ಸಾಕ್ಷ್ಯಗಳನ್ನು ನೀಡುವಂತೆ ಜನರನ್ನು ಕೋರಿದ್ದೆವು ಹಲವರು ಕೊಟ್ಟಿದ್ದಾರೆ. ಅವರ ಸಾಕ್ಷ್ಯಗಳು ಸರಿಯಾಗಿವೆಯೇ ಎಂಬುದರ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಹತ್ವದ ವಿಷಯಗಳು ಗೊತ್ತಾಗಿವೆ. ಈ ಪ್ರಕರಣಗಳ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡುವ ಸಮಯ ಹತ್ತಿರ ಬಂದಿದೆ, ಮಾತನಾಡುವ ಸಮಯದಲ್ಲಿ ನಾನು ಆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ 2020 ರ ಜೂನ್ 14ರಂದು ನಿಧನ ಹೊಂದಿದ್ದರು. ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಅದಕ್ಕೆ ಕೆಲವು ದಿನಗಳ ಮುಂಚೆಯಷ್ಟೆ ಸುಶಾಂತ್ರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮಹಡಿ ಮೇಲಿಂದ ಬಿದ್ದು ನಿಧನ ಹೊಂದಿದ್ದರು.

suddiyaana