ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ & ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆ..!

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ & ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆ..!

ಅಬಕಾರಿ ನೀತಿ ಅಕ್ರಮ ಕೇಸ್​​ಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಜೈಲು ಪಾಲಾಗಿರುವ ಮತ್ತೊಬ್ಬ ಸಚಿವ ಸತ್ಯೇಂದ್ರ ಜೈನ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಅಬಕಾರಿ ನೀತಿ ಅಕ್ರಮ ಕೇಸ್​​ಗೆ ಸಂಬಂಧಿಸಿ ಮನೀಶ್ ಸಿಸೋಡಿಯಾರನ್ನ ಸಿಬಿಐ ಈಗಾಗ್ಲೇ ಬಂಧಿಸಿದೆ. ಈ ನಡುವೆ ಸಿಸೋಡಿಯಾ ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ರು. ಆದ್ರೆ, ಹೈಕೋರ್ಟ್​ಗೆ ತೆರಳುವಂತೆ ಸರ್ವೋಚ್ಛ ನ್ಯಾಯಾಲಯ ಸೂಚಿಸಿದ್ದು, ಮನೀಶ್ ಸಿಸೋಡಿಯಾಗೆ ಭಾರಿ ಹಿನ್ನಡೆಯಾಗಿದೆ. ಈ ನಡುವೆ ಮನೀಶ್ ಸಿಸೋಡಿಯಾ ಜೈಲು ಪಾಲಾಗುತ್ತಿರುವ ದೇಶದ ಮೊದಲ ಶಿಕ್ಷಣ ಸಚಿವ ಅಂತಾ ಬಿಜೆಪಿ ಸಂಸದ, ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ಕುಹಕವಾಡಿದ್ದಾರೆ.

suddiyaana