ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ‘ಸುಪ್ರೀಂ’ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್

ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ‘ಸುಪ್ರೀಂ’ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್

ಅಬಕಾರಿ ನೀತಿ ಹಗರಣದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಚುನಾವಣೆಗೆ ಹಿನ್ನೆಲೆ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಇದೀಗ  ಮಧ್ಯಂತರ ಜಾಮೀನು ಅವಧಿ 7 ದಿನಗಳವರೆಗೆ ವಿಸ್ತರಿಸುವಂತೆ ಕೇಜ್ರಿವಾಲ್  ಸುಪ್ರೀಂಕೋರ್ಟ್​ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಐಪಿಎಲ್‌ ನಲ್ಲಿ 3ನೇ ಬಾರಿಗೆ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

ಅಬಕಾರಿ ನೀತಿ ಹಗರಣದಲ್ಲಿ ಪ್ರಮುಖ ಆರೋಪಿ ಎಂಬ ಆರೋಪ ಹೊತ್ತಿರುವ ಅರವಿಂದ್ ಕೇಜ್ರಿವಾಲ್​ಗೆ ಇತ್ತೀಚೆಗೆ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು. ಕೊನೆಯ ಹಂತದ ಮತದಾನದ ಒಂದು ದಿನದ ನಂತರ ಜೂನ್ 2 ರಂದು ದೆಹಲಿ ಸಿಎಂ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಗುತ್ತದೆ. ಇದೀಗ ಮತ್ತೆ ಮಧ್ಯಂತರ ಜಾಮೀನಿಗಾಗಿ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದಾರೆ.

ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್​ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ.

Shwetha M