ರಾಜ್ಯದಲ್ಲಿ ಪಟಾಕಿ ಬ್ಯಾನ್‌ ಆಗುತ್ತಾ? – ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

ರಾಜ್ಯದಲ್ಲಿ ಪಟಾಕಿ ಬ್ಯಾನ್‌ ಆಗುತ್ತಾ? – ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮು ಅಗ್ನಿ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡದಿಂದಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಹೊಸ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು. ಬೆಂಗಳೂರಿನಲ್ಲಿ ಹೆಚ್ಚು ಜನ ವಾಸ ಹಿನ್ನೆಲೆ, ಜೊತೆಗೆ ಇತ್ತೀಚೆಗೆ ಪಟಾಕಿ ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ಬ್ಯಾನ್​ಗೆ ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮದುವೆ ಸಮಾರಂಭವೊಂದರಲ್ಲಿ ಸಚಿವರ ಕಾಲ ಕೆಳಗೆ ರಾಶಿ ರಾಶಿ ನೋಟು – ಶಿವಾನಂದ ಪಾಟೀಲ್ ವಿರುದ್ಧ ಸಾರ್ವಜನಿಕರ ಆಕ್ರೋಶ

ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆ ಮಾಲೀಕ 2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ಆದರೆ 50 ಟನ್​ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು.

ಅಕ್ರಮ ದಸ್ತಾನು ಪರಿಶೀಲನೆ ವೇಳೆ ತಹಶಿಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್, ಪೈರ್ ಮತ್ತು ಟ್ರಾನ್ಸ್‌ಪೋರ್ಟ್‌ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಗಡಿಯಲ್ಲಿ ಆರ್ಟಿಓ ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಿಲ್ಲ. ಹಾಗಾಗಿ ತಹಶಿಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್ಭೇಟಿ

ಅತ್ತಿಬೆಲೆ ಪಟಾಕಿ ಗೋಡೌನ್​ನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಗೃಹ ಇಲಾಖೆ ಸಚಿವ ಪರಮೇಶ್ವರ್​ ಇಂದು ಭೇಟಿ ಮಾಡಿದ್ದು, ಘಟನೆ ಅಗ್ನಿಶಾಮಕ ಡಿಐಜಿ ಪಂತ್, ಐಜಿಪಿ ರವಿಕಾಂತೇಗೌಡರಿಂದ ಮಾಹಿತಿ ಪಡೆದುಕೊಂಡಿದ್ದಾರೆ.​ ಮಳಿಗೆ ಮಾಲೀಕನ ಬಗ್ಗೆ ಡಿಸಿಯಿಂದ ಮಾಹಿತಿ ಪಡೆದಿದ್ದು,​ ನಕಲಿ ಲೈಸೆನ್ಸ್ ಸೃಷ್ಟಿಸಿದ್ದರು ಎಂದು ಡಿಸಿ ದಯಾನಂದ್​ ಹೇಳಿದ್ದಾರೆ.

Shwetha M