ಆಗಸ್ಟ್​ 23 ʼರಾಷ್ಟ್ರೀಯ ಬಾಹ್ಯಾಕಾಶ ದಿನʼ, ಚಂದ್ರನ ಮೇಲೆ ಲ್ಯಾಂಡರ್ ಇಳಿದ ಸ್ಥಳ ‘ಶಿವಶಕ್ತಿ’ – ಪ್ರಧಾನಿ ಮೋದಿ ಘೋಷಣೆ

ಆಗಸ್ಟ್​ 23 ʼರಾಷ್ಟ್ರೀಯ ಬಾಹ್ಯಾಕಾಶ ದಿನʼ, ಚಂದ್ರನ ಮೇಲೆ ಲ್ಯಾಂಡರ್ ಇಳಿದ ಸ್ಥಳ ‘ಶಿವಶಕ್ತಿ’ – ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು: ಚಂದ್ರಯಾನ – 3 ಸಕ್ಸಸ್‌ ಕಂಡಿದ್ದು, ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಮಾಡಿದೆ. ಇದೀಗ ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ . ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ. ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ. ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: ಚಂದ್ರನ ಮೇಲೆ ಪ್ರಜ್ಞಾನ್‌ ಪರಾಕ್ರಮ.. ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ  – ಪ್ರಧಾನಿ ಮೋದಿ

ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್​ ಎಂದು ಹೆಸರಿಟ್ಟರು. ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಇಸ್ರೋ ವಿಜ್ಞಾನಿಗಳನ್ನು ಶ್ಲಾಘಿಸಿದರು.

ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು. ಈ ಯಶಸ್ಸು ಭಾರತದ ವೈಜ್ಞಾನಿಕ ಶಂಕನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟರು.

ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.

suddiyaana