ಆಟೋ ಓಡಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ –  ನಡು ರಸ್ತೆಯಲ್ಲೇ ಹಾರಿ ಹೋಯ್ತು ಪ್ರಾಣಪಕ್ಷಿ

ಆಟೋ ಓಡಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ –  ನಡು ರಸ್ತೆಯಲ್ಲೇ ಹಾರಿ ಹೋಯ್ತು ಪ್ರಾಣಪಕ್ಷಿ

ಬೆಂಗಳೂರು: ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ನೋಡ ನೋಡುತ್ತಿದ್ದಂತೆ ಆಟೋ ಚಾಲಕನಿಗೆ ಹೃದಯಾಘಾತ ಸಂಭವಿಸಿ ಪ್ರಾಣಪಕ್ಷಿ ಹಾರಿ ಹೋಗಿದೆ. ಈ ದೃಷ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಸೌಜನ್ಯ ಮನೆಗೆ ಭೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ – ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಪ್ರಸ್ತಾಪ

ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ಆಟೋ ಚಾಲಕ ತಿಮ್ಮೇಶ್‌ ಟೀ ಕುಡಿಯಲು ಆಟೋ‌ ನಿಲ್ಲಿಸಿ ತೆರಳುತ್ತಿದ್ದಾರೆ. ಆಟೋದಿಂದ ಕೆಳಗೆ ಇಳಿಯುತ್ತಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಎದೆಯನ್ನ ಸಾವರಿಸಿಕೊಳ್ಳುತ್ತ ಆಟೋದಿಂದ ತಿಮ್ಮೇಶ್ ಇಳಿದು ಹೋಗಿದ್ದಾರೆ. ಕೆಲವೇ ಹೊತ್ತಲ್ಲಿ ತಿಮ್ಮೇಶ್‌ ಕುಸಿದು ಬಿದ್ದಿದ್ದಾರೆ. ಅವರು ಕೆಳಗೆ ಬಿದ್ದ ತಕ್ಷಣ ಅಕ್ಕಪಕ್ಕದ ಅಂಗಡಿಯವರು ಅವರನ್ನು ರಕ್ಷಿಸಲು ಆಗಮಿಸಿದ್ದಾರೆ. ಎದೆಯನ್ನು ಉಜ್ಜಿದ್ದಾರೆ. ಪಿಟ್ಸ್ ಬಂದಿರಬಹುದು ಎಂದು ಭಾವಿಸಿ ಕಬ್ಬಿಣವನ್ನೂ ಕೈಗೆ ನೀಡಿದ್ದಾರೆ ಆದರೆ ಪ್ರಯೋಜನವಾಗಿಲ್ಲ. ತಿಮ್ಮೇಶ್ ಬಿದ್ದ ತಕ್ಷಣ ಅವರ ಜೀವ ಹೊರಟು ಹೋಗಿತ್ತು.

ಮೂಲತಃ ಮಂಡ್ಯ ಜಿಲ್ಲೆಯ ತಿಮ್ಮೇಶ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು. ಸಂಪಂಗಿ ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

suddiyaana