ಪರಿಷೆಗೆ ಬನ್ನಿ-ಕೈಚೀಲ ತನ್ನಿ – ಬಸವನಗುಡಿಯಲ್ಲಿ ಕಳ್ಳೇಕಾಯ್..ಕಳ್ಳೇಕಾಯ್..ಪರಿಷೆಯ ಖುಷಿ…

ಪರಿಷೆಗೆ ಬನ್ನಿ-ಕೈಚೀಲ ತನ್ನಿ – ಬಸವನಗುಡಿಯಲ್ಲಿ ಕಳ್ಳೇಕಾಯ್..ಕಳ್ಳೇಕಾಯ್..ಪರಿಷೆಯ ಖುಷಿ…

ಬಡವರ ಬಾದಾಮಿ ಕಳ್ಳೇಕಾಯ್.. ರುಚಿ ರುಚಿ ಕಳ್ಳೇಕಾಯ್.. ಬಸವನಗುಡಿಯ ಪರಿಷೆಯಲ್ಲಿ ಶನಿವಾರದಿಂದಲೇ ಕಡಲೆಕಾಯಿಯ ರಾಶಿ ಪರಿಷೆಯ ಸಂಭ್ರಮ ಹೆಚ್ಚಿಸಿದೆ. ಬೆಂಗಳೂರಿನ ಬಸವನಗುಡಿ ಪ್ರದೇಶದಲ್ಲಿ ನಡೆಯುವ ವಾರ್ಷಿಕ ನೆಲಗಡಲೆ ಜಾತ್ರೆಯ ಸಂಭ್ರಮ ಶುರುವಾಗಿದೆ. ಬಸವನಗುಡಿ ಕಡಲೆ ಕಾಯಿಪರಿಷೆ ಯಾಕೆ ಇಷ್ಟು ಪ್ರಸಿದ್ದಿ ಪಡೆದಿದೆ? ಬಸವನಗುಡಿಯಲ್ಲೇ ಯಾಕೆ ನಡೆಸುತ್ತಾರೆ? ಇದರ ಇತಿಹಾಸವೇನು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ…

ಇದನ್ನೂ ಓದಿ: ಒಂದೂವರೆ ವರ್ಷದ ಬಳಿಕ ಯಶ್ ಸಿನಿಮಾ ಟೈಟಲ್ ಅನೌನ್ಸ್ – ಫ್ಯಾನ್ಸ್ ಗೆ ಶಾಕ್ ಕೊಟ್ಟ ರಾಕಿಂಗ್ ಸ್ಟಾರ್!

ಬಸವನಗುಡಿ ಕಡಲೆಕಾಯಿ ಪರಿಷೆ ಬೆಂಗಳೂರಿನ ಬಸವನಗುಡಿ ಪ್ರದೇಶದಲ್ಲಿ ನಡೆಯುವ ವಾರ್ಷಿಕ ನೆಲಗಡಲೆ ಜಾತ್ರೆಯಾಗಿದೆ. ಈ ಪರಿಷೆಯನ್ನು ಬುಲ್ ಟೆಂಪಲ್ ರಸ್ತೆಯ ಎರಡೂ ಬದಿಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತಿವರ್ಷ ಎರಡು ದಿನಗಳ ಕಾಲ ನಡೆಯುತ್ತದೆ.

ಬೆಂಗಳೂರು ಬೆಳೆದು ಮಹಾ ನಗರವಾಗುವ ಮೊದಲು, ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಸಾಕಷ್ಟು ನೆಲಗಡಲೆ ಬೆಳೆಯುತ್ತಿದ್ದರು. ಕಟಾವಿಗೆ ಸಿದ್ಧವಾದ ನೆಲಗಡಲೆಯನ್ನೆಲ್ಲಾ ಗದ್ದೆಗೆ ಬಂದು ದಾಳಿ ಮಾಡುತ್ತಿದ್ದ ಬಸವ ಹಾಳು ಮಾಡುತ್ತಿದ್ದ. ಹೀಗಾಗಿ ರೈತರು ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸುತ್ತೇವೆ ಎಂದು ಪ್ರಾರ್ಥಿಸಿಕೊಂಡರು. ಇದಾದ ಕೆಲ ಸಮಯಗಳ ನಂತರ ಬಸವನಗುಡಿ ಪ್ರದೇಶದಲ್ಲಿ ನಂದಿಯ ವಿಗ್ರಹವೊಂದು ದೊರಕಿತು. ನಂತರ ಈ ಸ್ಥಳದಲ್ಲಿ ನಾಡಪ್ರಭು ಕೆಂಪೇಗೌಡರು 16ನೇ ಶತಮಾನದಲ್ಲಿ ನಂದಿಯ ವಿಗ್ರಹದ ಸುತ್ತಲೂ ದೇವಾಯವನ್ನು ನಿರ್ಮಿಸಿದರು. ಇದನ್ನು ಬಸವನ ಗುಡಿ ಅಥವಾ ಬಿಗ್ ಬುಲ್ ಟೆಂಪಲ್ ಎಂದು ಕರೆಯಾಗುತ್ತದೆ. ಕಡಲೆಕಾಯಿ ಪರಿಷೆ ಈ ದೇವಾಲಯದ ಸುತ್ತ ಕೇಂದ್ರೀಕೃತವಾಗಿದೆ ಮತ್ತು ಬಸವ ರೈತರು ಅರ್ಪಿಸಿದ ನೆಲಗಡಲೆಯನ್ನು ಸ್ವೀಕರಿಸಿ ಆಶೀರ್ವದಿಸುತ್ತಾನೆ ಎಂಬುದು ರೈತರ ನಂಬಿಕೆ. ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿ ಕಡಲೆ ಕಾಯಿ ಪರಿಷೆ ನಡೆಯುತ್ತದೆ. ಕಾರ್ತಿಕ ಮಾಸದ ಸೋಮವಾರವು ಭಗವಾನ್ ಶಿವನ ನೆಚ್ಚಿನ ದಿನವಾಗಿದ್ದು, ನಂದಿಯು ಶಿವನ ವಾಹನವಾಗಿರುವುದರಿಂದ ನಂದಿಗೆ ಈ ದಿನಗಳು ಪ್ರಿಯವಾಗಿದೆ. ಆದ್ದರಿಂದ ಕಾರ್ತಿಕ ಮಾಸದಲ್ಲಿ ಕಡೆಲೆಕಾಯಿ ಪರಿಷೆ ನಡೆಯುತ್ತದೆ.

ಪರಿಷೆಗೆ ಬಿಬಿಎಂಪಿ ಸಕಲ ಸಿದ್ದತೆ ಮಾಡಿಕೊಂಡಿದೆ. ‘ಪರಿಷೆಗೆ ಬನ್ನಿ-ಕೈಚೀಲ’ ತನ್ನಿ ಎಂಬ ಆಹ್ವಾನದೊಂದಿಗೆ ಪರಿಸರ ಸ್ನೇಹಿ ಪರಿಷೆ ನಡೆಸಲು ಬಿಬಿಎಂಪಿ ಮುಂದಾಗಿದೆ.

Sulekha